ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಳೆ ಹಾಕಿದ್ದ ಇಬ್ಬರು ಅರೆಸ್ಟ್

Public TV
1 Min Read

ಬೆಂಗಳೂರು: ಇಂದಿರಾ ಕ್ಯಾಂಟೀನ್‍ನ ಉಪಹಾರದಲ್ಲಿ ಜಿರಳೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯ ದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ ಜಿರಳೆ ಹಾಕಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ಅಕ್ಟೋಬರ್ 20ರಂದು ರಾಜರಾಜೇಶ್ವರಿನಗರದ ಕೊಟ್ಟಿಗೆಪಾಳ್ಯದ ಇಂದಿರಾ ಕ್ಯಾಂಟೀನ್‍ನಲ್ಲಿ ಒಂದೇ ದಿನದಲ್ಲಿ ರೈಸ್‍ಬಾತ್‍ನಲ್ಲಿ ಎರಡೆರೆಡು ಜಿರಳೆ ಸಿಕ್ಕಿತ್ತು. ಜಿರಲೆ ಸಿಕ್ಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಬಿಬಿಎಂಪಿ ಮೇಯರ್ ಸಂಪತ್ ಕುಮಾರ್ ಪ್ರತಿಕ್ರಿಯಿಸಿ, ಇಂದಿರಾ ಕ್ಯಾಂಟೀನ್ ಹೆಸರು ಹಾಳು ಮಾಡುವ ಉದ್ದೇಶದಿಂದಲೇ ಜಿರಳೆ ರಾಮಾಯಣ ಸೃಷ್ಟಿಸಿದ್ದಾರೆ. ಈ ಕುರಿತು ತನಿಖೆಯನ್ನು ನಡೆಸಿ ಸತ್ಯಾಂಶವನ್ನು ಹೊರತರುತ್ತೇವೆ ಎಂದು ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *