ಲಾರಿ, ಟ್ಯಾಂಕರ್ ಡಿಕ್ಕಿ – ಚಾಲಕರಿಬ್ಬರ ದುರ್ಮರಣ

Public TV
1 Min Read

-ಅಪಘಾತ ರಭಸಕ್ಕೆ ವಾಹನಗಳೆರಡೂ ನಜ್ಜುಗುಜ್ಜು

ರಾಯಚೂರು: ಸಿಮೆಂಟ್ ಲಾರಿ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮಾನ್ವಿಯ ಕುರ್ಡಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶ ಮೂಲದ ಸತ್ಯಜೀತ್ ವರ್ಮ ಹಾಗೂ ಚಳ್ಳಿಗೆರೆಯ ವಿ.ಆರ್. ಬಾಗೋಡಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಂಭೀರವಾಗಿ ಗಾಯಾಗಳಾಗಿದ್ದು, ಅವರನ್ನು ರಾಯಚೂರಿನ ರಿಮ್ಸ್ ಗೆ ದಾಖಲಿಸಲಾಗಿದೆ.

ಸಿಮೆಂಟ್ ಲಾರಿ ಮತ್ತು ಹಾಲಿನ ಟ್ಯಾಂಕರ್ ಎರಡು ವಾಹನಗಳೂ ವೇಗವಾಗಿ ಬರುತ್ತಿದ್ದವು. ಈ ವೇಳೆ ಅತೀ ವೇಗದ ಚಾಲನೆಯಲ್ಲಿದ್ದ ವಾಹನಗಳು ಮಾನ್ವಿಯ ಕುರ್ಡಿ ಕ್ರಾಸ್ ಬಳಿ ಡಿಕ್ಕಿಯಾಗಿವೆ. ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ರಾಯಚೂರು-ಮಾನ್ವಿ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡುವಂತಾಗಿತ್ತು.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ಘಟನೆ ಮಾನವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *