ಅಪಘಾತದ ರಭಸಕ್ಕೆ ಇನ್ನೊಂದು ರಸ್ತೆಗೆ ಜಂಪ್ ಮಾಡ್ದ ಸ್ಕಾರ್ಪಿಯೋ, ಲಾರಿಗೆ ಡಿಕ್ಕಿ: ಬೆಂಗ್ಳೂರಲ್ಲಿ ಇಬ್ಬರ ದುರ್ಮರಣ

Public TV
1 Min Read

ಬೆಂಗಳೂರು: ಸ್ಕಾರ್ಪಿಯೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು, ಇವರಿಬ್ಬರೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನವರು ಎಂದು ಹೇಳಲಾಗುತ್ತಿದೆ

ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕಾರ್ಪಿಯೋ ಇನ್ನೊಂದು ರಸ್ತೆಗೆ ಜಂಪ್ ಆಗಿ, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್ ಸಂಪೂರ್ಣ ಜಖಂ ಆಗಿದ್ದು, ಕಾರ್ ನ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದ ಹಿಂಬದಿ ಕುಳಿತಿದ್ದ ಮೂವರಿಗೆ ಕೂಡ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪರಿಣಾಮ ಮೃತದೇಹಗಳನ್ನು ಹೊರತೆಗೆಯುವಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಹರಸಾಹಸಪಟ್ಟರು. ಸದ್ಯ ಇಬ್ಬರು ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯ್ಲಲಿರೋ ಶವಾಗಾರಕ್ಕೆ ರವಾನಿಸಲಾಗಿದೆ.

ನಜ್ಜುಗುಜ್ಜಾದ ಕಾರನ್ನು ಕ್ರೇನ್ ಮೂಲಕ ಬೇರೆಡೆ ಸ್ಥಳಾಂತರಿಸಲಾಗಿದೆ. ಭಾಷಾ ಅನ್ನೊರಿಗೆ ಸೇರಿದ ಕ್ಯಾಂಟರ್ ಲಾರಿಯನ್ನು ಬ್ಲೂಡಾರ್ಟ್ ಕಂಪನಿಗೆ ಗಾಡಿ ಅಟೆಚ್ ಮಾಡಿದ್ದರು ಎಂಬುವುದಾಗಿ ತಿಳಿದುಬಂದಿದೆ.

 

Share This Article
Leave a Comment

Leave a Reply

Your email address will not be published. Required fields are marked *