ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಸ್ಥಳದಲ್ಲಿ ತಂದೆ, ಮಗ ಸಾವು

Public TV
1 Min Read

ತುಮಕೂರು: ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕ್ವಾಲಿಸ್ ವಾಹನದಲ್ಲಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಲ್ಲೆಯಲ್ಲಿ ನಡೆದಿದೆ.

ತುಮಕೂರು ತಾಲೂಕಿನ ನರುಗನಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್ ಸಿ ಕುಮಾರ್ ಹಾಗೂ ಅವರ ಮಗ ಜೀವನ ಮೃತಪಟ್ಟಿದ್ದಾರೆ.

ತಂದೆ ಮಗ ಸೇರಿ ಹೊನ್ನುಡಿಕೆಯಿಂದ ತುಮಕೂರಿಗೆ ಬರುತಿದ್ದ ವೇಳೆ ದಾರಿ ಮಧ್ಯೆ ನರುಗನಹಳ್ಳಿ ಬಳಿ ಘಟನೆ ಸಂಭವಿಸಿದೆ. ಕುಣಿಗಲ್ ಕಡೆಗೆ ಹೋಗುತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಚಾಲಕ ತನ್ನ ಮುಂದಿದ್ದ ವಾಹನಕ್ಕೆ ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬಂದ ಕ್ವಾಲಿಸ್ ಗೆ ಡಿಕ್ಕಿ ಹೊಡೆದಿದ್ದಾನೆ.

ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article
Leave a Comment

Leave a Reply

Your email address will not be published. Required fields are marked *