ಮೈಸೂರಿನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Public TV
0 Min Read

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆಯ ಶಿಂಡೇನಹಳ್ಳಿಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ 2 ಚಿರತೆ ಮರಿಗಳು ಪತ್ತೆಯಾಗಿವೆ.

ಗ್ರಾಮದ ಸತ್ತಿಗೇಗೌಡ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಕಟಾವು ಮಾಡುತ್ತಿದ್ದಾಗ 15 ದಿನಗಳ ಹಿಂದೆ ಜನಿಸಿರುವ 2 ಚಿರತೆ ಮರಿಗಳು ಕಂಡ ಬಂದವು. ತಕ್ಷಣ ಚಿರತೆ ಮರಿಗಳನ್ನು ಸಂರಕ್ಷಿಣೆ ಮಾಡಿ ಹೆಚ್.ಡಿ.ಕೋಟೆ ವಲಯ ಅರಣ್ಯ ಅಧಿಕಾರಿಗಳಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ.

ಚಿರತೆ ಮರಿಗಳು ದೊರೆತ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದು, ಕೂಡಲೇ ತಾಯಿ ಚಿರತೆಯನ್ನು ಸೆರೆಹಿಡಿಯುವಂತೆ ಒತ್ತಾಯ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *