ಇವರು ಎಣ್ಣೆ ಹೊಡೆದ್ರೆ ಸಾಕು ಏನಾದ್ರೂ ಕದಿಯಲೇ ಬೇಕು!

Public TV
1 Min Read

ಬೆಂಗಳೂರು: ಇವರು ಎಣ್ಣೆ ಹೊಡೆದ್ರೆ ಸಾಕ ಏನಾದರೂ ಕದಿಯಲೇಬೇಕಂತೆ. ಬೈಕು, ಕಾರು, ಆಟೋ ಏನೇ ಆಗಲಿ ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್ ಆಗುತ್ತಾರೆ.

ಈ ರೀತಿ ಕಳ್ಳತನಕ್ಕಿಳಿದಿದ್ದ ಇಬ್ಬರನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನದೀಂ ಅಹಮದ್ ಹಾಗೂ ಗುಲಾಂ ಹುಸೇನ್ ಎಂದು ಗುರುತಿಸಲಗಿದೆ. ಇವರು ಕದ್ದ ವಾಹನಗಳನ್ನ ಕೊಳ್ಳೋರ ಜೊತೆ ಸಂಚಾರಿ ಪೊಲೀಸರಿಗೂ ಯಾಮಾರಿಸುತ್ತಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ

ಮದ್ಯದ ನಶೆಯಲ್ಲಿ ಯಾವ ವಾಹನ ಕಂಡರೂ ಕ್ಷಣಮಾತ್ರದಲ್ಲಿ ಎಗರಿಸುತ್ತಿದ್ದ ಆರೋಪಿಗಳು ಕದ್ದ ವಾಹನದ ನಂಬರ್ ಪ್ಲೇಟ್ ಬದಲಿಸಿ ಮಾರಾಟ ಮಾಡುತ್ತಿದ್ದರು. ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಹುಳಿಮಾವು, ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದರು.

ಜೈಲಿಗೆ ಹೋಗಿ ಬಂದರೂ ಮತ್ತದೇ ಕೃತ್ಯ ಮುಂದುವರಿಸಿದ್ದರು. ಸದ್ಯ ಬಂಧಿತರಿಂದ 2 ಆಟೋ, 1 ಕಾರು 6 ಬೈಕುಗಳ ಜಪ್ತಿ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಶೋಧಕಾರ್ಯ ಮುಂದುವರಿದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *