ಮಂಡ್ಯದಲ್ಲಿ 3 ಪ್ರತ್ಯೇಕ ಅಪಘಾತ- ಇಬ್ಬರ ದುರ್ಮರಣ

Public TV
1 Min Read

ಮಂಡ್ಯ: ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಶ್ರೀರಂಗಪಟ್ಟಣದ ಮಯೂರ ಹೋಟೆಲ್ ಬಳಿ ಲಾರಿಯನ್ನು ರಿವರ್ಸ್ ತೆಗೆಯುವಾಗ ಹಿಂಬದಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಗುದ್ದಿ ಮೃತಪಟ್ಟಿದ್ದಾರೆ. ಎರಡನೇ ಪ್ರಕರಣದಲ್ಲಿ ಬಾಬುರಾಯನಕೊಪ್ಪಲು ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.

ಮೂರನೇ ಪ್ರಕರಣ ಕೆಆರ್‍ಪೇಟೆ ಬಸ್ ನಿಲ್ದಾಣದ ಎದರು ನಡೆದಿದ್ದು, ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕೆಎಸ್‍ಆರ್‍ಟಿಸಿ ಬಸ್ ಚಾಲಕ ಕೀರ್ತಿಕುಮಾರ್ ಸೇರಿದಂತೆ ಇಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಎಲ್ಲ ಪ್ರಕರಣಗಳು ತಡರಾತ್ರಿ ನಡೆದಿವೆ.

ಘಟನೆ ಸಂಬಂಧ ಶ್ರೀರಂಗಪಟ್ಟಣ ಮತ್ತು ಕೆಆರ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *