ಕಾರು, ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

By
1 Min Read

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ವೀರಾಪುರ ಹೊಸೂರು ಗೇಟ್ ಬಳಿ ನಡೆದಿದೆ.

ಬಾಬು (28) ಹಾಗೂ ಸೇತು (43) ಮೃತ ದುರ್ದೈವಿಗಳು. ಮೃತರು ಬೀರೂರಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಜ್ಜಂಪುರ ಕಡೆ ಹೋಗುತ್ತಿದ್ದ ಕಾರೊಂದು ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ 6 ಭಯೋತ್ಪಾದಕರ ಹತ್ಯೆ

ಈ ಘಟನೆಯ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು

Share This Article
Leave a Comment

Leave a Reply

Your email address will not be published. Required fields are marked *