ಜೈಲಧಿಕಾರಿ ಮೇಲೆ ಹಲ್ಲೆ ನಡೆಸಿ ಇಬ್ಬರು ಕೈದಿಗಳು ಪರಾರಿ

By
1 Min Read

ಅಮರಾವತಿ: ಆಂಧ್ರಪ್ರದೇಶದ (Andhra Pradesh) ಚೋಡವರಂ ಸಬ್-ಜೈಲಿನಲ್ಲಿ ಜೈಲಧಿಕಾರಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಇಬ್ಬರು ಕೈದಿಗಳು (Prisoners) ಪರಾರಿಯಾಗಿರುವ ಘಟನೆ ನಡೆದಿದೆ.

ಪಿಂಚಣಿ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕ ರವಿಕುಮಾರ್, ಜೈಲಿನ ಅಡುಗೆ ಕೋಣೆ ಬಳಿ ಜೈಲಧಿಕಾರಿ ವಾಸ ವೀರರಾಜು ಅವರ ಮೇಲೆ ಹಲ್ಲೆ ಮಾಡಿದ್ದ. ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

 ಈ ವೇಳೆ ಜೈಲಧಿಕಾರಿಯ ತಲೆಗೆ ಸುತ್ತಿಗೆಯಿಂದ ಹೊಡೆದು, ಅವರ ಬಳಿಯಿದ್ದ ಜೈಲಿನ ಬೀಗದ ಕೀಯನ್ನು ಕಸಿದುಕೊಂಡಿದ್ದ. ಆ ಸಂದರ್ಭ ಕಳ್ಳತನದ ಆರೋಪದ ಮೇಲೆ ವಿಚಾರಣೆಯಲ್ಲಿದ್ದ ಮತ್ತೊಬ್ಬ ಕೈದಿ ಬೆಜವಾಡ ರಾಮು ಕೂಡ ರವಿಕುಮಾರ್‌ನೊಂದಿಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

ಕೂಡಲೇ ಜೈಲಧಿಕಾರಿಗಳು ನೆರೆಯ ಪೊಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡಿದ್ದು, ಪರಾರಿಯಾದ ಕೈದಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಜೈಲಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article