ಉಡುಪಿ: ಇಲ್ಲಿನ ಅಂಬಲಪಾಡಿ ಬಳಿ ಯುವಕ ಮತ್ತು ಹುಡುಗಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಪಿಯುಸಿ ವಿದ್ಯಾರ್ಥಿನಿ, ವಲಸೆ ಕಾರ್ಮಿಕ ಮಲ್ಲೇಶ್ (23) ಆತ್ಮಹತ್ಯೆ ಮಾಡಿಕೊಂಡವರು. ಲೇಬರ್ ಕಾಲೊನಿಯ ಜೋಪಡಿಯಲ್ಲಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ವಾಸಿಸುವ ಕಾಲೊನಿ ಇದಾಗಿದೆ. ಹುಡುಗಿಯ ತಾಯಿ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿನಿ ತಾಯಿ ರಾಯಚೂರಿನಿಂದ ವಾಪಸಾಗುತ್ತಿದ್ದಾರೆ.