ಬೇಟೆಗೆಂದು ತೆರಳಿದ್ದ ಇಬ್ಬರು ವ್ಯಕ್ತಿಗಳು ನಾಪತ್ತೆ

Public TV
1 Min Read

ಮಂಗಳೂರು: ಬೇಟೆಗೆಂದು ತೆರಳಿದ್ದ ಇಬ್ಬರು ವ್ಯಕ್ತಿಗಳು ನಾಪತ್ತೆಯಾದ ಘಟನೆ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಪ್ರವೀಣ್ ತೌರೋ(33) ಮತ್ತು ಗ್ರೇಷನ್ ಡಿಸೋಜಾ(32) ನಾಪತ್ತೆಯಾಗಿರುವ ವ್ಯಕ್ತಿಗಳು. ಮೂಡಬಿದ್ರೆಯಿಂದ 10 ಕಿ.ಮೀ. ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ಬೇಟೆಗೆ ಇಬ್ಬರು ತೆರಳಿದ್ದರು. ಆದರೆ ಮತ್ತೆ ಅವರು ಹಿಂದಿರುಗಿಲ್ಲ.

ಇಬ್ಬರ ಮೊಬೈಲ್ ಫೋನ್ ಗಳು ಸ್ವಿಚ್ ಆಫ್ ಆಗಿದ್ದು, ಎಲ್ಲೋ ಹೋಗಿರಬಹುದು ಎಂದು ಮನೆಯವರು ಸುಮ್ಮನಿದ್ದರು. ಆದ್ರೆ ಬೇಟೆಗೆ ತೆರಳಿದ್ದ ಜೀಪ್ ಇಂದು ಕಾಡಿನಲ್ಲಿ ಪತ್ತೆಯಾಗಿದೆ. ಆದ್ದರಿಂದ ಗಾಬರಿಗೊಂಡ ಮನೆಯವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ವಿಷಯ ತಿಳಿದ ಮೂಡಬಿದ್ರೆ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ. ಖಾಸಗಿ ಟೆಂಪೋ ಚಾಲಕರಾಗಿರುವ ಪ್ರವೀಣ್ ತೌರೋ ಅವಿವಾಹಿತನಾಗಿದ್ದಾರೆ. ಮೂಡಬಿದ್ರೆಯಲ್ಲಿ ಸರ್ವಿಸ್ ಸ್ಟೇಷನ್ ಮಾಲೀಕನಾಗಿರುವ ಗ್ರೇಷನ್ ವಿವಾಹಿತರಾಗಿದ್ದಾರೆ. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *