ಬಂಡೆಗೆ ಡಿಕ್ಕಿ ಹೊಡೆದ ಟೂರಿಸ್ಟ್ ಬಸ್- ಏಳು ಪ್ರಯಾಣಿಕರ ಸಾವು

Public TV
1 Min Read

ಉಡುಪಿ: ಪ್ರವಾಸಿ ಬಸ್ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿ ಮಾಳ ಬಳಿ ನಡೆದಿದೆ.

ಮೈಸೂರು ಜಿಲ್ಲೆಯ ಬಸ್ ಇದಾಗಿದ್ದು, ಮೈಸೂರಿನಿಂದ ಮಂಗಳೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯ ಎಸ್.ಕೆ.ಬಾರ್ಡರ್ ಸಮೀಪದ ಅಬ್ಬಾಸ್ ಕಟ್ಟಿಂಗ್ ಬಳಿ ಬಸ್ ಬಂಡೆಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 35 ಪ್ರವಾಸಿಗರ ಪೈಕಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಾಟಿಯ ತಿರುವಿನಲ್ಲಿ ಪಕ್ಕದ ಬಂಡೆಗೆ ಡಿಕ್ಕಿಯಾದ ಪರಿಣಾಮ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಸ್ ಮುಂಭಾಗ ಕುಳಿತಿದ್ದ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *