ನಿಲ್ಲದ ಕ್ಯಾರ್ ಆರ್ಭಟ – ಇಂದೂ ಶಾಲಾ ಕಾಲೇಜುಗಳಿಗೆ ರಜೆ

Public TV
1 Min Read

ಉಡುಪಿ: ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಮುಂದುವರಿದಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದೆ.

ಅರಬ್ಬಿ ಸಮುದ್ರ ಭೋರ್ಗೆರೆಯುತ್ತಿದ್ದು, ಕಡಲ ತೀರ ಪ್ರದೇಶ ಮನೆಗಳಿಗೆ ಬೃಹತ್ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತಿವೆ. ಹೀಗಾಗಿ ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರವಾಹ ಎಚ್ಚರಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಿದ್ದ ದೀಪಾವಳಿ ರಜೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸ್ಥಾನದಲ್ಲಿರುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

ಚಂಡಮಾರುತ ಅತೀ ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗ, ಮಹಾರಾಷ್ಟ್ರ ಮತ್ತು ಗೋವಾದ ತೀರ ಪ್ರದೇಶ, ಪಶ್ಚಿಮಬಂಗಾಳ, ಮೇಘಾಲಯ, ಅಸ್ಸಾಂನಲ್ಲಿ ಬಿರುಗಾಳಿ ಸಹಿತ ರಣಮಳೆ ಸುರಿಸಲಿದೆ. ಇನ್ನೂ ಎರಡ್ಮೂರು ದಿನ ಮಳೆಯಬ್ಬರ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *