ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ – ಕೋಟ ಶ್ರೀನಿವಾಸ ಪೂಜಾರಿ

Public TV
1 Min Read

ಉಡುಪಿ: ಅಕ್ರಮಗಳ ವರದಿ ಮಾಡುವುದು ಮಾಧ್ಯಮಗಳ ಜವಾಬ್ದಾರಿ. ಸರ್ಕಾರ ವಾಮಮಾರ್ಗದಲ್ಲಿ ಮಾಧ್ಯಮಗಳ ಬಾಯಿ ಬಂದ್ ಮಾಡಲು ಯತ್ನಿಸುವುದು ಬೇಡ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಳ್ಳಾರಿ ಕೃಷ್ಣದೇವರಾಯ ವಿಶ್ವ ವಿದ್ಯಾಲಯ ಅಕ್ರಮದ ಬಗ್ಗೆ ಪಬ್ಲಿಕ್ ಟಿವಿ ಸುದ್ದಿ ಮಾಡಿದ್ದಕ್ಕೆ ವರದಿಗಾರನನ್ನು ಬಂಧನ ಮಾಡಿದ್ದನ್ನು ಖಂಡಿಸಿದರು. ಮಾಧ್ಯಮಗಳಿಗೆ ಅವರದ್ದೇ ಆದ ಜವಾಬ್ದಾರಿ ಇದೆ. ಸರ್ಕಾರದ ಲೋಪದೋಷ ಹೇಳುವುದು ಮೀಡಿಯಾಗಳ ಜವಾಬ್ದಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಧ್ಯಮಗಳ ಧನಿ ಧಮನ ಮಾಡಿದರೆ ಬಿಜೆಪಿ ಸುಮ್ಮನಿರಲ್ಲ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಲು ಪ್ರಯತ್ನಿಸಿದೆ. ಜಿ.ಟಿ ದೇವೇಗೌಡ ಸಚಿವ ಸಂಪುಟ ಸಭೆಯಲ್ಲಿ ಇದ್ದಾರೆ. ವರದಿಗಾರನನ್ನು ಬಂಧಿಸುವ ಬದಲು ಅಕ್ರಮ ಸರಿಪಡಿಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿ ಎಂದು ತಿಳಿಸಿದರು. ಇದನ್ನು ಓದಿ :ಬಳ್ಳಾರಿ ವಿವಿ ನೇಮಕಾತಿಯಲ್ಲಿ ಅಕ್ರಮದ ವಾಸನೆ – ವರದಿ ಮಾಡಿದ್ದಕ್ಕೆ ಪಬ್ಲಿಕ್ ಟಿವಿ ಮೇಲೆ ಕೇಸ್

ಸರ್ಕಾರ ಸತ್ಯಾಸತ್ಯತೆ ಅರಿತು ವಿಶ್ವ ವಿದ್ಯಾಲಯದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಬದಲಾಗಿ ವರದಿಗಾರರ ಬಂಧನ ಖಂಡನೀಯವಾದುದು ಎಂದು ಕೋಟ ಶ್ರೀನಿವಾಸ ಪೂಜಾರಿ ಖಂಡನೆ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *