ಕರಾವಳಿಯ ಬಹುಚರ್ಚಿತ ಮುಸ್ಲಿಂ ಬಿಲ್ಲವ ಸಮಾವೇಶ ರದ್ದು

Public TV
1 Min Read

ಉಡುಪಿ: ಕರಾವಳಿಯ ಬಹು ಚರ್ಚಿತ ಮುಸ್ಲಿಂ ಬಿಲ್ಲವ ಸಮಾವೇಶ ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹೋಗಿದೆ. ಉಡುಪಿಯಲ್ಲಿ ಇಂದು ನಡೆಯಬೇಕಿದ್ದ ಮುಸ್ಲಿಂ ಬಿಲ್ಲವ ಸಮಾವೇಶಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಸಾಮಾಜಿಕ ಜಾಲತಾಣದಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಬಿಲ್ಲವ ಸಮುದಾಯದ ಪ್ರಮುಖರಿಂದ ಸಮಾವೇಶದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ. ಹಿಂದೂ ಧರ್ಮದ ಒಂದು ಜಾತಿಯನ್ನು ಟಾರ್ಗೆಟ್ ಮಾಡಿಕೊಂಡು ಸಮಾವೇಶ ಆಯೋಜಿಸಿದ್ದಾರೆಂಬೂದು ಚರ್ಚೆಗೆ, ವಿವಾದಕ್ಕೆ ಕಾರಣ.

ಬಿಲ್ಲವರು ಬಿಜೆಪಿಯ ಪ್ರಬಲ ವೋಟ್ ಬ್ಯಾಂಕ್ ಎಂಬುವುದರಲ್ಲಿ ಎರಡು ಮಾತಿಲ್ಲ. ಸಮಾವೇಶ ರದ್ದು ಮಾಡಿಸುವ ಹಿಂದೆ ಬಿಜೆಪಿ ಕೆಲಸ ಮಾಡಿರೋದ್ರಲ್ಲಿ ಸಂಶಯವಿಲ್ಲ ಎನ್ನಲಾಗುತ್ತಿದೆ. ಮುಸ್ಲಿಂ ಬಿಲ್ಲವ ಸಮಾವೇಶಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದರು. ಆಮಂತ್ರಣದಲ್ಲಿ ಇದ್ದ ಮುಖ್ಯ ಅತಿಥಿಗಳೂ ಹಿಂದೆ ಸರಿದಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಬಿಲ್ಲವ ಮುಖಂಡರ ಒತ್ತಡದಿಂದ ಸಮಿತಿ ಇಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಿದೆ.

ಕಾರ್ಯಕ್ರಮ ರೂಪುರೇಷೆ ಮಾಡಿದ್ದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಕೋಟ ಶ್ರೀನಿವಾಸ ಪೂಜಾರಿ ಕಡೆ ಬೊಟ್ಟುಮಾಡಿ, ಅವರಿಂದ ಸಹಕಾರ ಸಿಗದ ಕಾರಣ ಕಾರ್ಯಕ್ರಮ ರದ್ದಾಗಿರೋದಾಗಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *