ಮನೆಯಲ್ಲಿ ಕೃಷ್ಣ ಪೂಜೆ ಮಾಡಿದ್ದರು- ಶ್ರೀಗಳನ್ನು ನೆನೆದು ರಾಮ್‍ದಾಸ್ ಕಣ್ಣೀರು

Public TV
1 Min Read

ಉಡುಪಿ: ನಮ್ಮ ಮನೆಯಲ್ಲಿ ಕೃಷ್ಣ ಪೂಜೆಯನ್ನು ಮಾಡಿದ್ದರು ಎಂದು ಹೇಳಿ ಪೇಜಾವರ ಶ್ರೀಗಳನ್ನು ನೆನಪಿಸಿಕೊಂಡು ಮಾಜಿ ಸಚಿವ ರಾಮ್ ದಾಸ್ ಕಣ್ಣೀರು ಹಾಕಿದರು.

ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈಸೂರಿಗೆ ಭೇಟಿ ಕೊಟ್ಟಾಗ ಕಾರಾಗೃಹಕ್ಕೆ ಭೇಟಿ ಕೊಟ್ಟು ಅಲ್ಲಿ ಯೋಗ ಕೇಂದ್ರ ಹಾಗೂ ಡಿಜಿಟಲ್ ಲೈಬ್ರರಿಯನ್ನು ತೆರೆದಿದ್ದರು. ಕೈದಿಗಳ ಮನಸು ಪರಿವರ್ತನೆಗೆ ಸಾಕಷ್ಟು ಶ್ರಮ ಪಟ್ಟಿದ್ದರು ಎಂದು ಹೇಳುತ್ತಾ ಶ್ರೀಗಳ ಜೊತೆಗಿನ ಕ್ಷಣಗಳನ್ನು ಮೆಲುಕು ಹಾಕಿದರು.

ಅವರು ಈ ಒಂದು ಯುಗದಲ್ಲಿ ಪ್ರವರ್ತಕರಾಗಿ ಎಲ್ಲ ರೀತಿಯ ಜ್ಞಾನವನ್ನು ಹೊಂದಿ ಸಮಾಜದ ಮಧ್ಯದಲ್ಲಿ ಯಾವುದೇ ಬೇಧ-ಭಾವವಿಲ್ಲದೆ ಕಟ್ಟಕಡೆಯ ವ್ಯಕ್ತಿಯಾಗಿದ್ದಾರೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

ಶ್ರೀಗಳ ಕೊನೆಯಾಸೆಯಂತೆ ಇಂದು ಬೆಳಗ್ಗೆ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ವೆಂಟಿಲೇಟರ್ ಸಹಿತ ಅಂಬುಲೆನ್ಸ್ ನಲ್ಲಿ ಪೇಜಾವರ ಮಠಕ್ಕೆ ಶಿಫ್ಟ್ ಮಾಡಲಾಯಿತು. ಸದ್ಯ ಮಠದ ಆಚರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳು ಮಠಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಅವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಮಠಕ್ಕೆ ಬರಬೇಡಿ, ಅಜ್ಜರ ಕಾಡು ಮೈದಾನಕ್ಕೆ ಬನ್ನಿ ಎಂದು ಕಿರಿಯ ಶ್ರೀಗಳು ಭಕ್ತರಲ್ಲಿ ಈಗಾಗಲೇ ಮನವಿ ಮಾಡಿಕೊಂಡಿದ್ದಾರೆ.

ಇತ್ತ ಅಜ್ಜರ ಕಾಡು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಈ ಮಧ್ಯೆ ಶ್ರೀಗಳು ಕೃಷ್ಣೈಕ್ಯರಾಗಿದ್ದು, ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *