ಪೇಜಾವರಶ್ರೀ ರಾಮಮಂದಿರದ ಭೂಮಿಪೂಜೆ ಮಾಡಬೇಕು – ಮಂತ್ರಾಲಯ ಶ್ರೀ

Public TV
1 Min Read

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ಸಮಸ್ಯೆಯಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಮಂತ್ರಾಲಯ ಮಠಾಧೀಶ ಸುಬುಧೇದ್ರ ತೀರ್ಥ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಮಂತ್ರಾಲಯದಲ್ಲಿ ದೈನಂದಿನ ಪೂಜೆ ಮುಗಿಸಿ ಬಂದಿದ್ದೇವೆ. ಶ್ರೀಗಳನ್ನು ಕಣ್ಣಾರೆ ನೋಡಿ ಈಗ ತೃಪ್ತಿ ಆಯಿತು. ಕ್ರಮ ಕ್ರಮವಾಗಿ ಗುಣಮುಖ ಆಗ್ತಾಯಿದ್ದಾರೆ. ಮಠದ ವತಿಯಿಂದ ಹೋಮ, ಜಪ, ಧಾರ್ಮಿಕ ವಿಧಿ ವಿಧಾನ ಏರ್ಪಡಿಸಿದ್ದೇವೆ. ಶಾಖಾಮಠ, ಭಕ್ತರು ಮತ್ತು ವಿದ್ವಾಂಸರಿಗೆ ಕರೆ ಕೊಟ್ಟು ಪ್ರಾರ್ಥನೆಗಳನ್ನು ಮಾಡಿದ್ದೇವೆ. ವೈದ್ಯ ತಂಡ ತುಂಬಾ ಶ್ರಮ ವಹಿಸುತ್ತಿದೆ. ಕೆಎಂಸಿ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.

ಕಿರಿಯ ಸ್ವಾಮೀಜಿಗಳಿಗೂ ಧೈರ್ಯ ನೀಡಿದ್ದೇವೆ. ದೇವರು ಅವರನ್ನು ಬೇಗ ಗುಣಮುಖವಾಗುವಂತೆ ಮಾಡಲಿ. ಪೇಜಾವರ ಶ್ರೀ ರಾಮಮಂದಿರಕ್ಕೆ ಧಾರ್ಮಿಕ ಲೌಕಿಕ ಹೋರಾಟ ಮಾಡಿದ ಹಿರಿಯ ವ್ಯಕ್ತಿ. ರಾಮಮಂದಿರ ನಿರ್ಮಾಣವಾಗಲಿ, ಪೇಜಾವರ ಶ್ರೀಗಳೇ ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿ ಎಂದು ಮಂತ್ರಾಲಯ ಸ್ವಾಮೀಜಿ ಹಾರೈಸಿದರು.

Share This Article
Leave a Comment

Leave a Reply

Your email address will not be published. Required fields are marked *