ಡಿಸಿಎಂ ಆಗಲ್ಲ, ಮುಖ್ಯಮಂತ್ರಿ ಆಗ್ತೀನಿ: ಉಮೇಶ್ ಕತ್ತಿ

Public TV
1 Min Read

ಬೆಳಗಾವಿ: ನಾನು ಡಿಸಿಎಂ ಆಗಲ್ಲ, ಮುಖ್ಯಮಂತ್ರಿ ಆಗುತ್ತೇನೆ. ಇಲ್ಲವಾದರೆ ಮಂತ್ರಿಯಾಗಿ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ್ ಕತ್ತಿ, ಕಾರ್ಯಕರ್ತರು ಒಗ್ಗಟ್ಟಾಗಿ ಉಪಚುನಾವಣೆಯಲ್ಲಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ. ಇಲ್ಲಿ ಯಾರು ಅನರ್ಹರಲ್ಲ, ಎಲ್ಲರೂ ಅರ್ಹರು. ರಮೇಶ್ ಜಾರಕಿಹೊಳಿ ಗೆದ್ದರೆ ಡಿಸಿಎಂ ಆಗ್ತೀನಿ ಎಂದು ಹೇಳುತ್ತಾರೆ. ರಮೇಶ್ ಜಾರಕಿಹೊಳಿ ಡಿಸಿಎಂ ಸ್ಥಾನ ಸಿಕ್ಕರೆ ಖುಷಿ. ನಮ್ಮ ಭಾಗದ ನಾಯಕರಿಗೆ ಡಿಸಿಎಂ ಸ್ಥಾನ ಸಿಕ್ಕರೆ ನಮಗೆ ಸಂತೋಷವಾಗುತ್ತದೆ ಎಂದು ತಿಳಿಸಿದರು.

ಮಾಧುಸ್ವಾಮಿ ಕನಕಪೀಠದ ವಿಚಾರವಾಗಿ ಶ್ರೀಗಳನ್ನು ಭೇಟಿಯಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಈ ವಿಚಾರ ಪರಿಣಾಮ ಬೀರಬೇಕು ಎಂಬುವುದು ಸಿದ್ದರಾಮಯ್ಯನವರ ಪ್ಲಾನ್ ಆಗಿದೆ ಎಂದು ಉಮೇಶ್ ಕತ್ತಿ ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *