ಭುವನೇಶ್ವರ್: ಕ್ರಿಕೆಟ್ (Cricket) ಪಂದ್ಯ ನಡೆಯುತ್ತಿದ್ದ ವೇಳೆ ʼನೋಬಾಲ್ʼ (No Ball) ನೀಡಿದ ಅಂಪೈರ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಒಡಿಶಾದ (Odisha) ಕಟಕ್ನಲ್ಲಿ ನಡೆದಿದೆ.
ಮೃತ ವ್ಯಕ್ತಿ ಲಕ್ಕಿ ರಾವುತ್ (22) ಎಂದು ಗುರುತಿಸಲಾಗಿದೆ. ಪಂದ್ಯದ ವೇಳೆ ‘ನೋಬಾಲ್’ ನೀಡಿದ ವಿಚಾರಕ್ಕೆ ಸ್ಮೃತಿ ರಂಜನ್ ರೌತ್ ಎಂಬಾತ ಜಗಳ ತೆಗೆದಿದ್ದಾರೆ. ನಂತರ ಹರಿತವಾದ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್
ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅಂಪೈರ್ ನೋಬಾಲ್ ನೀಡಿದ್ದರು. ಈ ಸಂಬಂಧ ಅಂಪೈರ್ ಹಾಗೂ ಆಟಗಾರನ ನಡುವೆ ವಾಗ್ವಾದ ನಡೆದಿದೆ. ನಂತರ ಅಂಪೈರ್ಗೆ ಆಟಗಾರ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಮೈದಾನದಲ್ಲಿ ಇದ್ದವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಅಂಪೈರ್ನನ್ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಗಿಲ್ ಯುದ್ಧದ ಹೀರೋ ರಸ್ತೆ ಅಪಘಾತದಲ್ಲಿ ದುರ್ಮರಣ
ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.