ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

By
1 Min Read

ಬಾಗಲಕೋಟೆ: ಅಂಗನವಾಡಿಗೆ (Anganwadi) ಹೊರಟಿದ್ದ ಮಗುವನ್ನು ಚಿಕ್ಕಪ್ಪನೇ ಎತ್ತಿಕೊಂಡು ಹೋಗಿ ಕತ್ತು ಸೀಳಿ ಕೊಲೆಗೈದ ಘಟನೆ ಹುನಗುಂದ (Hungund) ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.

ಹತ್ಯೆ ಆರೋಪಿಯನ್ನು ಭೀಮಪ್ಪ ಎಂದು ಗುರುತಿಸಲಾಗಿದೆ. ಈ ಹಿಂದೆ ಹೆಂಡತಿ (Wife) ಮೇಲೆ ಹಲ್ಲೆ ಮಾಡಬೇಡ ಎಂದು ಭೀಮಪ್ಪನಿಗೆ ಆತನ ಸಹೋದರ ಮಾರುತಿ ಬುದ್ಧಿ ಹೇಳಿದ್ದರು. ಇದರಿಂದ ದ್ವೇಷಕಾರುತ್ತಿದ್ದ ಭೀಮಪ್ಪ ಮಾರುತಿ ಅವರ ಪುತ್ರನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿ, ಮಗುವನ್ನು ಕರೆದೊಯ್ದು ಕೊಲೆಗೈದಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ನೀಡಿ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಪುಟಾಣಿ ಮಗುವಿನ ಮೃತದೇಹ ಕಂಡು ಅಜ್ಜಿ ಪಾರ್ವತಿ ಕಣ್ಣೀರಿಟ್ಟಿದ್ದಾರೆ.

Share This Article