ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

Public TV
2 Min Read

ಹಾಸನ: ಜಿಲ್ಲೆಯಲ್ಲಿ ಬಿಗಡಾಯಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲವನ್ನು ಬಗೆಹರಿಸಲು ಸ್ವತಃ ಮಾಜಿಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಸನ ಜಿಲ್ಲೆಗೆ ಭೇಟಿ ನೀಡಿದ್ದರು. ಹೆಚ್‍ಡಿಕೆ ಭೇಟಿ ಟಿಕೆಟ್ ಆಕಾಂಕ್ಷಿಗಳು, ಅವರ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಕುತೂಹಲ ಹುಟ್ಟುಹಾಕಿತ್ತು. ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರ (Hassan Vidhanasabha Constituency) ಕ್ಕೆ ಅಭ್ಯರ್ಥಿ ಯಾರಾಗ್ತಾರೆ ಎಂಬ ಬಗ್ಗೆ ಕುಮಾರಸ್ವಾಮಿ ಘೋಷಣೆ ಮಾಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಎಂದು ಪರೋಕ್ಷವಾಗಿ ಹೇಳಿದರೆ ಹೊರತು ಹಾಸನ, ಅರಕಲಗೂಡು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿಲ್ಲ. ಎಲ್ಲರಲ್ಲೂ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಕುಮಾರಸ್ವಾಮಿ ನಡೆಯಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮುಂದುವರಿದಿದೆ.

ಜೆಡಿಎಸ್‍ (JDS) ನ ಭದ್ರಕೋಟೆ ಹಾಸನ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳ ಪೈಕಿ ಎರಡಲ್ಲಿ ಹಾಲಿ ಇಬ್ಬರು ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ (K M ShivalingeGowda) ಹಾಗೂ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೊತೆ ಹಲವು ಬಾರಿ ಮಾತುಕತೆ ನಡೆಸಿದ ಜೆಡಿಎಸ್ ನಾಯಕರು ಮನವೊಲಿಸುವ ಪ್ರಯತ್ನ ವಿಫಲವಾಗಿತ್ತು. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಖುದ್ದು ಅಖಾಡಕ್ಕಿಳಿದ ಹೆಚ್‍ಡಿಕೆ ಮಾಜಿ ಸಚಿವ ಎ.ಮಂಜು (A Manju) ಜೊತೆ ಮಾತುಕತೆ ನಡೆಸಿ ಹಾಲಿ ಶಾಸಕರಿಗೆ ಟಕ್ಕರ್ ಕೊಡುವ ಮೂಲಕ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೆಡಿಯಾಗಿದ್ದಾರೆ.  ಇದನ್ನೂ ಓದಿ: ಕನ್ನಡ, ತುಳು ಎರಡೂ ಭಾಷೆಗಳನ್ನು ಉಳಿಸಿ, ಬೆಳೆಸಬೇಕು: ಒಡಿಯೂರು ಶ್ರೀ

ಇದೇ ರೀತಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ ಶಿವಲಿಂಗೇಗೌಡ ಕೂಡ ಪಕ್ಷದಿಂದ ದೂರ ಉಳಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದರು. ಆದರೆ ಅದನ್ನು ಎಲ್ಲಿಯೂ ಬಹಿರಂಗ ಪಡಿಸಿರಲಿಲ್ಲ. ಶಿವಲಿಂಗೇಗೌಡರು ಪಕ್ಷದ ಚಿಹ್ನೆ, ಬಾವುಟ ಬಳಸದೆ ಪ್ರತಿಭಟನೆ ಸಮಾವೇಶ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಅರಸೀಕೆರೆ ಪಟ್ಟಣದಲ್ಲಿ ರೋಡ್ ಶೋ ಹಾಗೂ ಬೃಹತ್ ಸಮಾವೇಶ ನಡೆಸಿ ಶಿವಲಿಂಗೇಗೌಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭಾನುವಾರವೇ ಅರಸೀಕೆರೆಗೆ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎನ್ನಲಾಗಿತ್ತು. ಆದರೆ ಪರೋಕ್ಷವಾಗಿ ಬಾಣಾವರ ಅಶೋಕ್ (Banavara Ashok) ಅಭ್ಯರ್ಥಿ ಎಂದು ಹೇಳಿದರೆ ಹೊರತು ಅಧಿಕೃತವಾಗಿ ಘೋಷಣೆ ಮಾಡಲಿಲ್ಲ. ಅಲ್ಲದೇ ಯಾವುದೇ ಟಿಕೆಟ್ ಘೋಷಣೆ ಮಾಡದೇ ಕಾಲವೇ ನಿರ್ಧಾರ ಮಾಡುತ್ತೆ ಎಂದ್ರು. ಇದರಿಂದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯುಂಟಾಯ್ತು.

ಒಟ್ಟಿನಲ್ಲಿ ಮೇಲ್ನೋಟಕ್ಕೆ ಅರಕಲಗೂಡಿಗೆ ಎ.ಮಂಜು, ಅರಸೀಕೆರೆಗೆ ಬಾಣಾವರ ಅಶೋಕ್ ಅಭ್ಯರ್ಥಿ ಆಗುವುದು ಬಹುತೇಕ ಖಚಿತವಾಗಿದೆ. ಆದರೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಹೊಸ ಮದ್ದು ಅರೆಯಲು ದಳಪತಿಗಳು ಸಜ್ಜಾಗಿದ್ದು. ಕುತೂಹಲಕ್ಕೆ ಕಾರಣವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *