ಮುಖವನ್ನು ಕಲ್ಲಿನಿಂದ ಜಜ್ಜಿ, ಸುಟ್ಟ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ!

Public TV
0 Min Read

ಮಡಿಕೇರಿ: ನಗರದ ಹೃದಯದ ಭಾಗದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ನಗರದ ನಗರದ ಓಂಕಾರೇಶ್ವರ ದೇವಾಲಯದ ಬಳಿಯ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಮುಖವನ್ನು ಕಲ್ಲಿನಿಂದ ಜಜ್ಜಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.


ಮೃತ ವ್ಯಕ್ತಿಯ ಚಹರೆ ಪತ್ತೆಯಾಗಿಲ್ಲ. ಆದ್ರೆ ಭಿಕ್ಷುಕನಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಡಿವೈಎಸ್‍ಪಿ ಸುಂದರ್‍ರಾಜ್, ಟೌನ್ ಎಸ್‍ಐ ಷಣ್ಮುಗಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದೆ. ಈ ಸಂಬಂಧ ಮಡಿಕೇರಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *