ಅಮಿತ್‌ ಶಾ ರಥಕ್ಕೆ ಕರೆಂಟ್‌ ಶಾಕ್‌ – ಅಪಾಯದಿಂದ ಪಾರು

Public TV
1 Min Read

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣಾ (Rajasthan Election) ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್‌ ಶಾ (Amit Shah) ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ

ಮಂಗಳವಾರ ರಾಜಸ್ಥಾನದ ನಾಗೌರ್‌ನಲ್ಲಿ ಅಮಿತ್ ಶಾ ರಥದಲ್ಲಿ (Chariot) ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.  ಇದನ್ನೂ ಓದಿ: ವಿವಾಹಿತೆಯಿಂದ ಹನಿಟ್ರ್ಯಾಪ್ – ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಪರ್ಬತ್‌ಸರ್‌ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಶಾ ಅವರು ಮತ್ತೊಂದು ವಾಹನದ ಮೂಲಕ ಪರ್ಬತ್ಸರ್‌ಗೆ ತೆರಳಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ

ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ. ನವೆಂಬರ್‌ 25 ರಂದು ರಾಜಸ್ಥಾನದಲ್ಲಿ ಚುನಾವಣೆ ನಡೆಯಲಿದ್ದು ಡಿಸೆಂಬರ್‌ 5 ರಂದು ಮತ ಎಣಿಕೆ ನಡೆಯಲಿದೆ.

Share This Article