ರಾಹುಲ್ ಜಯಗಳಿಸಿರೋ ಅಮೇಥಿ ಕಾಂಗ್ರೆಸ್ಸಿನ ಭದ್ರಕೋಟೆ ಯಾಕೆ?

Public TV
1 Min Read

ಲಕ್ನೋ: ಗುಜರಾತ್ ವಿಧಾನಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಪರಿಗಣಿತವಾದ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಮುಖಭಂಗ ಅನುಭವಿಸಿದೆ. ಆಡಳಿತರೂಢ ಬಿಜೆಪಿ ಎದುರು ಕಾಂಗ್ರೆಸ್ ಧೂಳೀಪಟವಾಗಿದೆ.

ಕಾಂಗ್ರೆಸ್ ಮುಕ್ತ ಭಾರತಕ್ಕೆ ಹೊರಟಿರುವ ಬಿಜೆಪಿ, ಇದೀಗ ಕಾಂಗ್ರೆಸ್ಸಿನ ಭದ್ರಕೋಟೆ ಅಮೇಥಿಗೆ ಲಗ್ಗೆ ಇಟ್ಟಿದೆ. ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿ ನಗರ ಪಂಚಾಯ್ತಿಯ 16 ಕ್ಷೇತ್ರಗಳ ಪೈಕಿ, 14ರಲ್ಲಿ ಬಿಜೆಪಿ ಜಯ ಸಾಧಿಸಿ, ವಿಜಯೋತ್ಸವ ಆಚರಿಸಿದೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಯಾಗ ವಿಫಲವಾಗಿದ್ದು, ಬಿಜೆಪಿ ವಶವಾಗಿರೋದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಘಾತ ಮೂಡಿಸಿದೆ. ಅಮೇಥಿಯಲ್ಲದೆ, ಕಾಂಗ್ರೆಸ್ ಅಧ್ಯಕ್ಷೆ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರದಲ್ಲೂ ಕಮಲ ಅರಳಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಪ್ರತಿನಿಧಿಸುವ ಗೋರಖ್‍ಪುರದಲ್ಲಿಯೂ ಕೇಸರಿ ಪತಾಕೆ ಹಾರಿದೆ. ಮುಖ್ಯಮಂತ್ರಿಯಾದ ಮೊದಲ ವರ್ಷದಲ್ಲೇ ಯೋಗಿ ಆದಿತ್ಯಾನಾಥ್ ಗೆದ್ದಿದ್ದಾರೆ. ಬಿಜೆಪಿ ಮೊದಲ ಸ್ಥಾನದಲ್ಲಿದ್ರೆ ಬಿಎಸ್‍ಪಿ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಎಸ್ಪಿ ಇದೆ.

ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಇದು ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸಗಳಿಗೆ ಸಿಕ್ಕ ಜಯ ಎಂದಿದ್ದಾರೆ. ಈ ಫಲಿತಾಂಶ ನೋಡಿದ್ರೆ ಗುಜರಾತ್ ಫಲಿತಾಂಶ ಊಹಿಸಬಹುದು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳನ್ನ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಅಮೇಥಿ ಭದ್ರಕೋಟೆ ಯಾಕೆ?ಅಮೇಥಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯೆಂದೇ ಪರಿಗಣಿಸಲಾಗಿದೆ. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿಯಿಂದ ಹಿಡಿದು ಈಗಿನ ತಲೆಮಾರಿನ ರಾಹುಲ್ ಗಾಂಧಿವರೆಗೆ ರಾಜಕೀಯ ಪುರ್ನಜನ್ಮ ನೀಡಿದ ಕ್ಷೇತ್ರವೇ ಅಮೇಥಿ. ಜನತಾ ಪಾರ್ಟಿ ಹಾಗೂ ಬಿಜೆಪಿ ಒಂದೊಂದು ಬಾರಿ ಗೆದ್ದಿದ್ದು ಬಿಟ್ಟರೆ, ಕಾಂಗ್ರೆಸ್ ಹಿಡಿತದಲ್ಲೇ ಇರೋ ಲೋಕಸಭಾ ಕ್ಷೇತ್ರವೇ ಅಮೇಥಿ. (ಇದನ್ನೂ ಓದಿ:ಕಾಂಗ್ರೆಸ್‍ಗೆ ಮತ್ತೆ ಮತ್ತೆ ಸೋಲು: ಅಮೇಥಿಯಲ್ಲಿ ರಾಹುಲ್‍ಗೆ ಭಾರೀ ಮುಖಭಂಗ)

 

 

Share This Article
Leave a Comment

Leave a Reply

Your email address will not be published. Required fields are marked *