ಮುಲಾಯಂ ಸಿಂಗ್ ಯಾದವ್ ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ: ಬಿಜೆಪಿ

Public TV
1 Min Read

ಲಕ್ನೋ: ಮುಲಾಯಂ ಸಿಂಗ್ ಯಾದವ್ ಅವರು ಮನಃಪೂರ್ವಕವಾಗಿ ಸಮಾಜವಾದಿ ಪಕ್ಷದೊಂದಿಗಿಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆಯ ಪಕ್ಷಕ್ಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್‍ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಸಮಾಜವಾದಿ ಪಕ್ಷದ ಪರಿಸ್ಥಿತಿ ಹೇಗಿದೆ ಎಂದರೆ ಅಖಿಲೇಶ್ ಯಾದವ್ ಅವರು ತಮ್ಮ ಕ್ಷೇತ್ರದ ಪ್ರಚಾರಕ್ಕಾಗಿ ಮುಲಾಯಂ ಸಿಂಗ್ ಯಾದವ್ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಟೀಕಿಸಿದರು.

ಅಖಿಲೇಶ್ ಯಾದವ್ ಅವರು ಮುಲಾಯಂ ಸಿಂಗ್ ಯಾದವ್ ಅವರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಅವರು ಮನಃಪೂರ್ವಕವಾಗಿ ಸಮಾಜವಾದಿಪಕ್ಷದೊಂದಿಗೆ ಇಲ್ಲ ಹಾಗೂ ಅವರ ಆಶೀರ್ವಾದವು ಅವರ ಸೊಸೆ ಅಪರ್ಣಾ ಯಾದವ್ ಅವರ ಪಕ್ಷಕ್ಕಿದೆ ಎಂದರು. ಇದನ್ನೂ ಓದಿ: ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿ ಸಂಬಂಧಿ ಜೊತೆ ಅಖಿಲೇಶ್‌ ಮತಯಾಚನೆ: ಯೋಗಿ ಆದಿತ್ಯನಾಥ್

ಇತ್ತೀಚೆಗಷ್ಟೇ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಕಳೆದ ಚುನಾವಣೆಯಲ್ಲಿ ಅವರು ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದರು, ಆದರೆ ಬಿಜೆಪಿಯ ರೀಟಾ ಬಹುಗುಣ ಜೋಶಿ ಅವರನ್ನು ಸೋಲಿಸಿದರು. ಇದನ್ನೂ ಓದಿ: ಅಹ್ಮದಾಬಾದ್ ಸರಣಿ ಬಾಂಬ್ ಸ್ಫೋಟ – 38 ಮಂದಿಗೆ ಮರಣ ದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

Share This Article
Leave a Comment

Leave a Reply

Your email address will not be published. Required fields are marked *