ಸಿಎಂ ಯೋಗಿಗೆ ಪ್ರಿಯಾಂಕ ಗಾಂಧಿ ಸವಾಲ್ – ಉತ್ತರ ನೀಡಿದ್ರು ಯುಪಿ ಪೊಲೀಸ್

Public TV
1 Min Read

ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದಾರೆ. ಪ್ರಿಯಾಂಕ ಅವರ ಸವಾಲಿಗೆ ಸಿಎಂ ಬದಲಾಗಿ ಉತ್ತರ ಪ್ರದೇಶದ ಪೊಲೀಸರು ಉತ್ತರ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಅಹಿಂಸಾತ್ಮಕ ಘಟನೆಗಳತ್ತ ಬಿಜೆಪಿ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪ್ರಿಯಾಂಕ ಗಾಂಧಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಪ್ರಿಯಾಂಕ ಟ್ವೀಟ್ ಗೆ ಉತ್ತರ ಪ್ರದೇಶದ ಪೊಲೀಸರು ಅಂಕಿ ಸಂಖ್ಯೆಗಳ ಮೂಲಕ ಉತ್ತರಿಸಿದ್ದಾರೆ.

ಪ್ರಿಯಾಂಕ ಗಾಂಧಿ ಟ್ವೀಟ್:
ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಯಾರ ಭಯವಿಲ್ಲದೇ ತಿರುಗಾಡುತ್ತಿದ್ದಾರೆ. ಒಂದಾದ ನಂತರ ಒಂದು ಅಪರಾಧ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಆದ್ರೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಯಾವುದನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಉತ್ತರ ಪ್ರದೇಶದ ಸರ್ಕಾರ ಅಪರಾಧಿಗಳನ್ನು ಎದುರಿಸಲು/ಬಂಧಿಸಲು ಅಸಮರ್ಥವಾಗಿದೆಯಾ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಯುಪಿ ಪೊಲೀಸ್ ಉತ್ತರ:
ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ ಮತ್ತು ಅಂತಹವರ ವಿಚಾರಣೆ ನಡೆಯುತ್ತಿದೆ. ಕಳೆದ ಎರಡು ವರ್ಷದಲ್ಲಿ 9,225 ಅಪರಾಧಿಗಳ ಬಂಧನ ಮತ್ತು 81 ಜನರು ಸಾವನ್ನಪ್ಪಿದ್ದಾರೆ. ಇದುವರೆಗೂ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 200 ಕೋಟಿ ರೂ. ಗೂ ಅಧಿಕ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಇದರ ಹೊರತಾಗಿ ದರೋಡೆ, ಕೊಲೆ, ಕಳ್ಳತನ, ಅಪಹರಣ ಅಂತಹ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ.

ಮತ್ತೊಂದು ಟ್ವೀಟ್ ನಲ್ಲಿ, ಪೊಲೀಸರ ಬಲಿಷ್ಠ, ಪಾರದರ್ಶಕತೆ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಜನರು ಪೊಲೀಸರ ಬಗ್ಗೆ ನಂಬಿಕೆ ಮತ್ತು ಗೌರವವನ್ನು ಹೊಂದಿದ್ದಾರೆ. ಶೇ.20ರಿಂದ 35 ರಷ್ಟು ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ರಾಜ್ಯದ ಜನತೆಯ ಭದ್ರತೆ ಮತ್ತು ರಕ್ಷಣೆಗಾಗಿ ಉತ್ತರ ಪ್ರದೇಶದ ಪೊಲೀಸರು ಬದ್ಧರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *