ಪತ್ನಿ ನಡತೆಯಿಂದ ಬೇಸತ್ತು ಪತಿ ಆತ್ಮಹತ್ಯೆ

Public TV
1 Min Read

ಮೈಸೂರು: ಪತ್ನಿ ನಡತೆಯಿಂದ ಬೇಸತ್ತು ಪತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ ನರಸೀಪುರ ತಾಲೂಕಿನ ಹನುಮನಾಳು ಗ್ರಾಮದಲ್ಲಿ ನಡೆದಿದೆ.

ಸುರೇಶ್ (32) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೆಂಡತಿ ನೇತ್ರಾವತಿ ನಡತೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಾಗುತ್ತಿದೆ.

ಮೃತ ಸುರೇಶ್ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಪತ್ನಿ ನೇತ್ರಾವತಿ ಆಟೋ ಡ್ರೈವರ್ ಯೋಗೇಶ್ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟಕೊಂಡಿದ್ದಳು ಎಂದು ಹೇಳಲಾಗುತ್ತಿದೆ. ಹೀಗಾಗಿ ಇವಳನ್ನ ಪರಿವರ್ತಿಸಲು ಯತ್ನಿಸಿ ವಿಫಲನಾಗದ ಹಿನ್ನೆಲೆಯಲ್ಲಿ ಸುರೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಮೃತ ಸುರೇಶ್ ತಾಯಿ ಸೊಸೆಯ ವಿರುದ್ಧ ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *