ವಿಷ ಸೇವಿಸಿ ಜೀವನ್ಮರಣದ ಹೋರಾಡುತ್ತಿದ್ದ ಯುಪಿ ಐಪಿಎಸ್ ಅಧಿಕಾರಿ ಸಾವು

Public TV
1 Min Read

ಲಕ್ನೋ: ವಿಷ ಸೇವಿಸಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಸುರೇಂದ್ರ ಕುಮಾರ್ ದಾಸ್ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಪತ್ನಿಯೊಂದಿಗೆ ಜಗಳವಾಡಿದ್ದ ಸುರೇಂದ್ರ ಅವರು, ಜೀವನ ಅಂತ್ಯಗೊಳಿಸುವ ದಾರಿಗಳ ಬಗ್ಗೆ ತಮ್ಮ ಮೊಬೈಲ್ ಹಾಗೂ ಲ್ಯಾಪ್ ಟಾಪ್‍ನಲ್ಲಿ ಕೆಲ ದಿನಗಳಿಂದ ಗೂಗಲ್ ಸರ್ಚ್ ಮಾಡಿದ್ದರು ಎನ್ನುವುದು ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು. 30 ವರ್ಷದ ಅಧಿಕಾರಿ ಸುರೇಂದ್ರ ಕುಮಾರ ದಾಸ್ ಅವರು ಆಗಸ್ಟ್ 9ರಂದು ಕಾನ್ಪುರ ಪೂರ್ವ ವಿಭಾಗದ ಎಸ್‍ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಸೆಪ್ಟೆಂಬರ್ 5 ರಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ದಾಸ್ ಅವರನ್ನು ಪೇದೆಯೊಬ್ಬರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಅವರನ್ನು ಬದುಕಿಸಲು ಮುಂಬೈನಿಂದ ವೈದ್ಯರ ತಂಡವನ್ನು ಕರೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಾಸ್ ಅವರು ಮೃತಪಟ್ಟಿದ್ದಾರೆ.

ವಿಷ ಕಿಡ್ನಿಯ ಮೇಲೆ ಪ್ರಭಾವ ಬೀರಿದ್ದು, ದೇಹದ ಎಲ್ಲ ಅಂಗಗಳೂ ಬಹುತೇಕ ಕಾರ್ಯ ಸ್ಥಗಿತಗೊಳಿಸಿವೆ ಎಂದು ಶನಿವಾರವೇ ಆಸ್ಪತ್ರೆಯ ಹಿರಿಯ ವೈದ್ಯ ರಾಜೇಸ್ ಅಗರವಾಲ್ ತಿಳಿಸಿದ್ದರು.

ಶನಿವಾರ ಉತ್ತರ ಪ್ರದೇಶ ರಾಜ್ಯದ ಡಿಜಿಪಿ ಓ.ಪಿ.ಸಿಂಗ್ ಕೂಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇನ್ನು ಸುರೇಂದ್ರ ಅವರ ಸಾವಿನ ಸುದ್ದಿ ತಿಳಿಸಿಯುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *