ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ

Public TV
2 Min Read

ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಸಚಿವರು ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ. ನಿನ್ನೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಕೊಟ್ಟರೆ, ಇಂದು ದಾರಾ ಸಿಂಗ್ ಚೌಹಾಣ್ ರಾಜೀನಾಮೆ ನೀಡಿ ಬಿಜೆಪಿಗೆ ಆಘಾತ ನೀಡಿದ್ದಾರೆ.

ದಾರಾ ಸಿಂಗ್ ಚೌಹಾಣ್ ಯೋಗಿ ಸರ್ಕಾರದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾಗಿದ್ದರು. ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷದಿಂದ ಹೊರಬಂದಿದ್ದಾರೆ. ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ಆಗುತ್ತಿರುವ ತೀವ್ರ ದಬ್ಬಾಳಿಕೆಯಿಂದಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ದಾರಾ ಸಿಂಗ್ ಚೌಹಾಣ್ ರಾಜೀನಾಮೆಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

ನಿನ್ನೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಹಾಗೂ ನಾಲ್ವರು ಶಾಸಕರು ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್‍ಪಿ) ಸೇರಿದ್ದರು. ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜೀನಾಮೆ ನೀಡಿ ಸ್ವತಃ ಅವರೇ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಇವರ ಆಪ್ತರೆಂದೇ ಗುರುತಿಸಿಕೊಂಡಿರುವ ರೋಷನ್ ಲಾ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಾಗ್ವತಿ ಸಾಗರ್, ವಿನಯ್ ಶಂಕ್ಯಾ ಅವರು ಸಹ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್

ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯದ ಪ್ರಭಾವಿ ನಾಯಕನಾಗಿರುವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಾಯಾವತಿ ನಾಯಕತ್ವದ ಬಿಎಸ್‍ಪಿ ತೊರೆದು 2016ರಲ್ಲಿ ಬಿಜೆಪಿ ಸೇರಿದ್ದರು. ಒಬಿಸಿ ಮತದಾರರನ್ನು ಸೆಳೆಯಲು ಹಾಗೂ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ವಿರುದ್ಧ ಪ್ರಬಲ ಪೈಪೋಟಿ ನೀಡುವ ಬಿಜೆಪಿ ಯೋಜನೆಗಳಿಗೆ ಮೌರ್ಯ ಪ್ರಮುಖ ವ್ಯಕ್ತಿಯಾಗಿದ್ದರು.

ಭಿನ್ನ ಸಿದ್ಧಾಂತರದ ಹೊರತಾಗಿಯೂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ನಾನು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ದೇನೆ. ಆದರೆ ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ಆಗುತ್ತಿರುವ ತೀವ್ರ ದಬ್ಬಾಳಿಕೆಯಿಂದಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಮೌರ್ಯ ಸ್ಪಷ್ಟಪಡಿಸಿದ್ದರು. ಇಂದು ರಾಜೀನಾಮೆ ನೀಡಿದ ದಾರಾ ಸಿಂಗ್ ಚೌಹಾಣ್ ಕೂಡ ಸ್ವಾಮಿ ಪ್ರಸಾದ್ ಮೌರ್ಯರ ಹಾದಿ ಹಿಡಿದಿದ್ದಾರೆ. ಇದನ್ನೂ ಓದಿ: ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್ 

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿರುವಂತೆ ಸಚಿವರೇ ರಾಜೀನಾಮೆ ನೀಡಿ ಪಕ್ಷ ತೊರೆಯುತ್ತಿರುವುದು ಬಿಜೆಪಿಗೆ ಹಿನ್ನಡೆ ತಂದಿದ್ದು, ಮತ್ತೊಮ್ಮೆ ಯೋಗಿ ಅಧಿಕಾರಕ್ಕೇರುವ ಪ್ಲಾನ್‍ಗೆ ಕಂಟಕ ಎದುರಾಗಿದೆ.

Share This Article
Leave a Comment

Leave a Reply

Your email address will not be published. Required fields are marked *