ಮೃತ ಬೇಟೆಗಾರನ ಬಳಿ ಜಿಂಕೆ, ಗನ್ ಸಿಕ್ಕಿದೆ, ಪರಮಾತ್ಮನಿಂದಲೇ ಶಿಕ್ಷೆಯಾಗಿದೆ: ಸೋಮಣ್ಣ

Public TV
1 Min Read

ಚಾಮರಾಜನಗರ: ಕಾವೇರಿ ನದಿಯಲ್ಲಿ (Kaveri River) ಶವವಾಗಿ ಸಿಕ್ಕ ತಮಿಳುನಾಡು (Tamil Nadu) ಬೇಟೆಗಾರ ಕರ್ನಾಟಕ (Karnataka) ಅರಣ್ಯ ಸಿಬ್ಬಂದಿಯ ಗುಂಡಿಗೆ ಬಲಿಯಾಗಿದ್ದಾನೆ ಎಂಬ ಆರೋಪವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ (V Somanna) ನಿರಾಕರಿಸಿದರು.

ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಆತನ ಶವವನ್ನು ತಮಿಳುನಾಡಿನವರೇ ಮರಣೋತ್ತರ ಪರೀಕ್ಷೆ ಕೊಂಡೊಯ್ದಿದ್ದು, ವರದಿ ಬಂದ ನಂತರ ಸತ್ಯಾಂಶ ಏನೆಂದು ಗೊತ್ತಾಗಲಿದೆ. ಆತನ ಬಳಿ ಜಿಂಕೆ ಶವ ಹಾಗೂ ಗನ್ ಸಿಕ್ಕಿದೆ. ಏಳೆಂಟು ವರ್ಷಗಳ ಹಿಂದೆಯೂ ಇಲ್ಲೇ ಬೇಟೆಯಾಡಲು ಬಂದು ಸಿಕ್ಕಿಬಿದ್ದಿದ್ದ. ಆತ ಮಾಡಿದ ತಪ್ಪಿಗೆ ಪರಮಾತ್ಮನಿಂದ ಶಿಕ್ಷೆಯಾಗಿದೆ ಎಂದರು.

ಮೀನು ಹಿಡಿಯಲು ಸಾವಿರಾರು ಜನ ಬರುತ್ತಾರೆ. ಯಾವ ಮೀನುಗಾರನಿಗೂ ಅನಾನುಕೂಲವಾಗಿಲ್ಲ. ಆತ ಮೀನುಗಾರನಾಗಿದ್ದರೆ ಮರಣೋತ್ತರ ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ಆತ ಅಮಾಯಕನಾಗಿದ್ದರೆ ಎರಡು ರಾಜ್ಯಗಳ ಅಧಿಕಾರಿಗಳ ಜೊತೆ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸಿಎಂ ಮಾಡ್ಬೇಕು: ಭೈರತಿ ಸುರೇಶ್

ಘಟನೆಯೇನು?: ಚಾಮರಾಜನಗರ (Chamarajanagar) ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ, ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಒಬ್ಬ ಬೇಟೆಗಾರ ಸಾವು?

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *