ಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಆಸರೆ ನೀಡುವುದು ನಮ್ಮ ಕರ್ತವ್ಯ : ವಿ.ಸೋಮಣ್ಣ

Public TV
2 Min Read

ಬೆಂಗಳೂರು: ಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಆಸರೆ ನೀಡುವುದು ನಮ್ಮ ಕರ್ತವ್ಯ. ನಿಮ್ಮ ಜೊತೆಯಲ್ಲಿ ನಾವಿದ್ದೇವೆ ಎಂದು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮಾರುತಿ ಮಂದಿರ ವಾರ್ಡ್ ಸಂಗೊಳ್ಳಿ ರಾಯಣ್ಣ ಉದ್ಯಾನವನ ಆವರಣದಲ್ಲಿ ಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಧನ ಚಕ್ಕು ಮತ್ತು ಮಂಜೂರಾತಿ ಆದೇಶ ಪತ್ರವನ್ನು ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಯುವ ನಾಯಕರಾದ ಅರುಣ್ ಸೋಮಣ್ಣ ಅವರು ವಿತರಿಸಿದರು. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು

ಇದೇ ವೇಳೆ ಭಾರತೀಯ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಮತ್ತು ದುರಂತದಲ್ಲಿ ಮಡಿದ ಎಲ್ಲರಿಗೂ ಶ್ರದ್ದಾಂಜಲಿ ಸಲ್ಲಿಸಿ 2 ನಿಮಿಷ ಮೌನಚರಣೆ ಮಾಡಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಚಿಂತನೆ ಮತ್ತು ರಾಜ್ಯ ಸರ್ಕಾರದ ದಿಟ್ಟ ನಿಲುವು ಕ್ರಮಗಳಿಂದ ಕೊರೊನಾ ಸಾಂಕ್ರಮಿಕ ರೋಗ ಹತೋಟಿಯಲ್ಲಿದೆ. ಕೊರೊನಾ ಸಾಂಕ್ರಮಿಕ ರೋಗದ ಭಯ ಮತ್ತು ಅಂಜಿಕೆಪಟ್ಟು ಸಾಕಷ್ಟು ಜನರು ಮೃತಪಟ್ಟರು. ಲಕ್ಷಾಂತರ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದರು. ನೋವಿನಲ್ಲಿ ಕಣ್ಣಿರಿನಲ್ಲಿ ಜೀವನ ಸಾಗಿಸುವ ಕುಟುಂಬಕ್ಕೆ ಆಸರೆಯಾಗಬೇಕು ಮತ್ತು ನಿಮ್ಮ ಕುಟುಂಬದ ಜೊತೆಯಲ್ಲಿ ನಾವಿದ್ದು, ಸಹಾಯ ಮಾಡುತ್ತೇವೆ ಎಂದು ಹೇಳಿದರು.

modi

ಬಿಪಿಎಲ್ ಕಾರ್ಡ್‍ದಾರರ ಕುಟುಂಬಕ್ಕೆ 1.50ಲಕ್ಷ ರೂ. ಚಕ್ಕು ಮತ್ತು ಎಪಿಎಲ್ ಕುಟುಂಬದವರಿಗೆ 50 ಸಾವಿರ ರೂ. ಮಂಜೂರಾತಿ ಆದೇಶ ಪತ್ರ ವಿತರಿಸಲಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 65 ಹಾಸಿಗೆ ಸಾಮ್ಯರ್ಥವುಳ್ಳ ಐಸಿಯು ಆಸ್ಪತ್ರೆ ನಿರ್ಮಿಸಲಾಗಿದೆ ಮತ್ತು ಕಿಡ್ನಿ ಸಂಬಂದಿಸಿದ ರೋಗಿಗಳಿಗೆ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

ಕೊರೋನ ಎರಡನೇಯ ಲಾಕ್ ಡೌನ್ ಸಂದರ್ಭದಲ್ಲಿ ಬಡವರು ಹಸಿವಿನಿಂದ ಬಳಲಬಾರದು ಎಂದು 70 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ಮತ್ತು ಸೋಂಕಿತರ ಮನೆಗಳಿಗೆ ಉಚಿತವಾಗಿ ಔಷಧಿ ವಿತರಿಸಲಾಯಿತು. ಕೋವಿಡ್-19ನಿಂದ ಮೃತಪಟ್ಟ ತಂದೆ, ತಾಯಿ ಇಲ್ಲದಿರುವ ಮಕ್ಕಳ ಪಾಲನೆ ಮತ್ತು ಶಿಕ್ಷಣಕ್ಕೆ ಸಹಾಯ ಮಾಡುವುದಾಗಿ ತಿಳಿಸಿದರು.

ಕೋವಿಡ್ ಪರಿಹಾರ ಧನ ವಿತರಣಾ ಕಾರ್ಯಕ್ರಮದಲ್ಲಿ ಸಂಬಂದಿಕರು, ಸ್ನೇಹಿತರು, ಕ್ಷೇತ್ರದ ಹಲವಾರು ಜನರು ಕೋವಿಡ್ ಸೋಂಕಿನಿಂದ ಮೃತಪಟ್ಟಿರುವುದನ್ನು ನೆನದು ವಸತಿ ಕಣ್ಣಿರು ಹಾಕಿದರು. ಇದನ್ನೂ ಓದಿ: ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್

ಕಾರ್ಯಕ್ರಮದಲ್ಲಿ ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಕೆ.ಉಮೇಶ್ ಶೆಟ್ಟಿ, ವಾಗೀಶ್ ರಾಮಪ್ಪ, ದಾಸೇಗೌಡ, ಜಯರತ್ನ, ರೂಪ ಲಿಂಗೇಶ್ವರ್ ಮತ್ತು ಸ್ಲಂ ಬೋರ್ಡ್ ನಿರ್ದೇಶಕರಾದ ಕ್ರಾಂತಿರಾಜು ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *