ವಾಜಪೇಯಿ 101ನೇ ಜಯಂತಿ – 100 ಹೊಸ `ಅಟಲ್ ಕ್ಯಾಂಟೀನ್’ಗಳ ಉದ್ಘಾಟನೆ

1 Min Read

– ಐದು ರೂಪಾಯಿಗೆ ಊಟ

ನವದೆಹಲಿ: ಕರ್ನಾಟಕದ ಇಂದಿರಾ ಕ್ಯಾಂಟಿನ್ (Indira Canteen) ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ ಇಂದು (ಡಿ.25) ರಾಜಧಾನಿಯಲ್ಲಿ 100 ಹೊಸ `ಅಟಲ್ ಕ್ಯಾಂಟೀನ್’ಗಳನ್ನು ಆರಂಭಿಸಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ 5 ರೂ.ಗೆ ಊಟ ಸಿಗಲಿದೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್‌ನ ಉದ್ಘಾಟನೆ ನೆರವೇರಿಸಿದರು. ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷದ ಚುನಾವಣಾ ಭರವಸೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಕ್ಯಾಂಟೀನ್‌ನಲ್ಲಿ ದಿನಕ್ಕೆ ಸುಮಾರು 500 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಯಿದೆ. ಈ ಮೂಲಕ ಒಟ್ಟಾರೆಯಾಗಿ ದಿನಕ್ಕೆ ಸುಮಾರು ಒಂದು ಲಕ್ಷ ಜನರಿಗೆ ಊಟ ಒದಗಿಸಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ 30 ಸಾವಿರ ಉದ್ಯೋಗ – ರಾಹುಲ್‌ ಗಾಂಧಿ, ಅಶ್ವಿನಿ ವೈಷ್ಣವ್‌ ಮಧ್ಯೆ ಕ್ರೆಡಿಟ್‌ ವಾರ್‌

ಈ ಕ್ಯಾಂಟೀನ್‌ಗಳಲ್ಲಿ ರೊಟಿ, ದಾಲ್, ತರಕಾರಿ, ಅನ್ನ ಮತ್ತು ಉಪ್ಪಿನಕಾಯಿ ಸೇರಿದಂತೆ ಪೋಷಕಾಂಶವುಳ್ಳ ಆಹಾರ ಲಭ್ಯವಿರುತ್ತದೆ. ಒಂದು ಊಟದ ವೆಚ್ಚ ಸುಮಾರು 30 ರೂ. ಆಗಿದ್ದರೂ, ಸರ್ಕಾರದ ಸಬ್ಸಿಡಿಯಿಂದ 5 ರೂ.ಗೆ ಒದಗಿಸಲಾಗುತ್ತಿದೆ. ಕ್ಯಾಂಟೀನ್‌ಗಳನ್ನು ಮುಖ್ಯವಾಗಿ ಪ್ರಮುಖ ಪ್ರದೇಶಗಳ ಸಮೀಪ ಸ್ಥಾಪಿಸಲಾಗಿದ್ದು, ದೆಹಲಿ ಅರ್ಬನ್ ಶೆಲ್ಟರ್ ಇಂಪ್ರೂವ್‌ಮೆಂಟ್ ಬೋರ್ಡ್ ಇವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.

ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಆರಂಭವಾದ ಈ ಯೋಜನೆಯು ದೆಹಲಿ ಬಡವರಿಗೆ ದೊಡ್ಡ ಆಸರೆಯಾಗಲಿದೆ. ಇದು ನಿರ್ಧಾರ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಡವರ ಕಡೆಗೆ ಇದ್ದ ಕಾಳಜಿಯನ್ನು ನೆನಪಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ತಿಳಿಸಿದ್ದಾರೆ.ಇದನ್ನೂ ಓದಿ: Chitradurga Bus Accident | ಮಗಳೇ ಎಲ್ಲಿ ಹೋದ್ಯಮ್ಮ? – ಮಕ್ಕಳನ್ನು ಕಾಣದೇ ಪೋಷಕರ ಆಕ್ರಂದನ

 

Share This Article