ಅನ್ನಭಾಗ್ಯ ಜಾಹೀರಾತಿನ ಅನ್ನದಾತನೊಂದಿಗೆ ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯ ವರ್ತನೆ

Public TV
1 Min Read

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅನ್ನದಾತನನ್ನು ನಗರದ ವಾಣಿವಿಲಾಸ ಆಸ್ಪತ್ರೆಯಲ್ಲಿ ಪಶುವಿನಂತೆ ನೋಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಂ.ಸಿ.ರಾಜು ಆಸ್ಪತ್ರೆ ಸಿಬ್ಬಂದಿಯಿಂದ ಅವಮಾನಕ್ಕೊಳದ ರೈತ. ಇವರು ಮೂಲತಃ ಬೆಂಗಳೂರು ಗ್ರಾಮಂತರ ಜಿಲ್ಲೆಯ ಮಾರಹಳ್ಳಿ ನಿವಾಸಿಯಾಗಿದ್ದಾರೆ. ಇವರು ಮಾಜಿ ಸಿಎಂ ಸಿದ್ದರಾಮಯ್ಯನ ಕನಸಿನ ಯೋಜನೆಯಾಗಿದ್ದ ಅನ್ನಭಾಗ್ಯ ಜಾಹೀರಾತಿನಲ್ಲಿ ತಮ್ಮ ಮಗನೊಂದಿಗೆ ಕಾಣಿಸಿಕೊಂಡಿದ್ದರು.

ರೈತ ರಾಜು ತನ್ನ ಮಗನನ್ನು ಕಿಡ್ನಿ ತೊಂದರೆಯ ಕಾರಣದಿಂದ ನಗರದ ವಾಣಿವಿಲಾಸ ಆಸ್ಪತ್ರೆಗೆ ಕರೆತಂದಿದ್ದರು. ಮಗ ನಂದರಾಜು ಕಿಡ್ನಿ ತೊಂದರೆಯಿಂದಾಗಿ ಅವನ ಹೊಟ್ಟೆಯಲ್ಲಿ ನೀರು ತುಂಬಿಕೊಂಡಿತ್ತು. ಹೀಗಾಗಿ ಜೂನ್ 11ಕ್ಕೆ ಮಗನನ್ನು ವಾಣಿವಿಲಾಸ ಆಸ್ಪತ್ರೆಗೆ ಕರೆತಂದಿದ್ದರು. ಮಗನ ಅವಸ್ಥೆ ಕಂಡರೂ ಆಸ್ಪತ್ರೆಯ ಸಿಬ್ಬಂದಿಗಳು ಕ್ಯಾರೇ ಎನ್ನದೇ ಅಲ್ಲಿಂದ ಇಲ್ಲಿಗೆ ಓಡಾಡಿಸಿ ಕೊನೆಗೆ ದಾಖಲು ಮಾಡಿಕೊಂಡಿದ್ದಾರೆ.

ವಾಣಿವಿಲಾಸ ಆಸ್ಪತ್ರೆಯಲ್ಲಿ ದಾಖಲಾಗಿಸಿದ್ದರೂ ಸಹ ಮಗ ನಂದರಾಜುವಿನ ತೊಂದರೆ ಕಡಿಮೆಯಾಗಿಲ್ಲ. ಹೀಗಾಗಿ ರೈತ ರಾಜಪ್ಪ ವಾಣಿವಿಲಾಸ ಆಸ್ಪತ್ರೆಯ ವೈದ್ಯರಾದ ಮೂರ್ತಿ ಹಾಗೂ ರಘುರವರನ್ನು ವಿಚಾರಿಸಿದಾಗ, ಬೇಜವಾಬ್ದಾರಿತನದಿಂದ ನಿಮಗೇನು ಹೊಟ್ಟೆ ಕೊಯ್ಯಬೇಕಾ, ಇಲ್ಲಿಂದ ಹೊರಡಿ ಎಂದು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡದಿಂದ ಬೇಸತ್ತ ರೈತ ತನ್ನ ಮಗನನ್ನು ಉಳಿಸಿಕೊಳ್ಳುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡಿ ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *