ಪತ್ನಿಯನ್ನು ಕೊಂದು ದೇಹದ ಮೇಲೆ ಉಪ್ಪು ಹಾಕಿ ಯಾರಿಗೂ ಅನುಮಾನ ಬರದಂತೆ ತರಕಾರಿ ಬೆಳೆದ!

Public TV
1 Min Read

ಲಕ್ನೋ: ವ್ಯಕ್ತಿಯೊಬ್ಬ ಹೊಲವೊಂದರಲ್ಲಿ ಪತ್ನಿಯನ್ನು (Wife) ಕೊಂದು ಆಕೆಯ ಶವವನ್ನು ಹೂತಿಟ್ಟ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ನಡೆದಿದೆ.

ದಿನೇಶ್ ಬಂಧಿತ ಆರೋಪಿ. ದಿನೇಶ್ ತರಕಾರಿ ಬೆಳೆಗಾರನಾಗಿದ್ದ. ದಿನೇಶ್ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ದಿನೇಶ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಒಂದು ದಿನ ಮನೆಯಲ್ಲಿಟ್ಟು ಹೊಲದಲ್ಲಿ ಹೂತಿದ್ದಾನೆ.

ಅಷ್ಟೇ ಅಲ್ಲದೇ ಶವ ಬೇಗನೇ ಕೊಳೆಯಲಿ ಎಂದು 30 ಕೆ.ಜಿ ಉಪ್ಪನ್ನು (Salt) ದೇಹದ ಮೇಲೆ ಹಾಕಿದ್ದ. ಅದಾದ ಬಳಿಕ ಕೊಲೆಯನ್ನು ಮುಚ್ಚಿ ಹಾಕಲು, ಶವವನ್ನು ಹೂತು ಹಾಕಿರುವುದು ಯಾರಿಗೂ ಅನುಮಾನ ಬರಬಾರದೆಂದು ಶವವನ್ನು ಹೂತು ಹಾಕಿದ್ದ ಸ್ಥಳದಲ್ಲಿ ತರಕಾರಿಗಳನ್ನು (Vegetable) ಬೆಳೆದಿದ್ದ.

ಅದಾದ ಕೆಲ ದಿನಗಳ ನಂತರ ದಿನೇಶ್ ತನ್ನ ಪತ್ನಿ ಕಾಣೆ ಆಗಿದ್ದಾಳೆ ಎಂದು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದಾಗ ದಿನೇಶ್ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

ಘಟನೆಗೆ ಸಂಬಂಧಿಸಿ ಪೊಲೀಸರು ದಿನೇಶ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಹಿಟ್ & ರನ್ ಕೇಸ್ – ಕಾರು ಡಿಕ್ಕಿ, ಮೇಲಿಂದ ಹಾರಿದ ಯುವತಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *