ರಾಜ್ಯಸಭಾ ಕಾರ್ಯಾಲಯಕ್ಕೆ ದಿಢೀರ್ ಭೇಟಿ – ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ವೆಂಕಯ್ಯನಾಯ್ಡು

Public TV
1 Min Read

ನವದೆಹಲಿ: ರಾಜ್ಯಸಭಾ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿದ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯನಾಯ್ಡು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಸುವಂತೆ ಆದೇಶಿಸಿದ್ದಾರೆ.

ಪಾರ್ಲಿಮೆಂಟ್ ನಲ್ಲಿ ಇರುವ ರಾಜ್ಯಸಭಾ ಕಾರ್ಯಾಲಯದ ವಿವಿಧ ಕಚೇರಿಗಳಿಗೆ ಅಧ್ಯಕ್ಷರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಉದ್ಯೋಗಿಗಳು ಸಮಯ ಪಾಲನೆ ನಿಯಮವನ್ನು ಉಲ್ಲಂಘಿಸಿದ ವಿಚಾರ ಗಮನಕ್ಕೆ ಬಂದಿದೆ. ಅಷ್ಟೇ ಅಲ್ಲದೇ ಹಲವು ಮಂದಿ ಗೈರು ಹಾಜರಿ ಹಾಕಿದ ವಿಚಾರ ಬೆಳಕಿಗೆ ಬಂದಿತ್ತು. ಇದನ್ನು ನೋಡಿದ ವೆಂಕಯ್ಯನಾಯ್ಡು ಕೂಡಲೇ ಕಾರ್ಯಾಲಯದ ಅಧಿಕಾರಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಹಾಕುವಂತೆ ಆದೇಶಿಸಿದ್ದಾರೆ.

ರಾಜ್ಯಸಭಾ ಕಾರ್ಯಾಲಯದಲ್ಲಿ ಕೆಲವೊಮ್ಮೆ ಹೆಚ್ಚು ಕೆಲಸ ಇರುತ್ತದೆ. ಅದರಲ್ಲೂ ಅಧಿವೇಶನದ ಸಮಯದಲ್ಲಿ ಸ್ವಲ್ಪ ಹೆಚ್ಚೇ ಇರುತ್ತದೆ ಎನ್ನುವುದನ್ನು ಅರಿತಿದ್ದೇನೆ. ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಿಂದ ಜವಬ್ದಾರಿ ಮತ್ತು ಹೊಣೆಗಾರಿಕೆ ಹೆಚ್ಚುತ್ತದೆ. ಕೆಲಸದ ಜವಾಬ್ದಾರಿ ಅರಿತು ನೌಕರರು ತಾವಾಗಿಯೇ ಕೆಲಸದಲ್ಲಿ ತೊಡಗಿಕೊಳ್ಳುವ ವಾತಾವರಣವನ್ನು ಸೃಷ್ಟಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದು ವೆಂಕಯ್ಯನಾಯ್ಡು ತಿಳಿಸಿದ್ದಾರೆ.

ಕಾರ್ಯಾಲಯದ ಸ್ವಚ್ಛತೆಗೆ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುಬೇಕು. ಸಂಬಂಧಪಟ್ಟ ಏಜನ್ಸಿಗಳ ಜೊತೆ ಸಹಕಾರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಿಬ್ಬಂದಿ ವರ್ಗಕ್ಕೆ ವೆಂಕಯ್ಯನಾಯ್ಡು ಆದೇಶಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *