ಹಾಡಹಗಲೇ ಚೂರಿಯಿಂದ ಇರಿದುಕೊಂಡ ವ್ಯಾಪಾರಿಗಳು- ಮೂವರ ಸ್ಥಿತಿ ಗಂಭೀರ

Public TV
1 Min Read

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳ ಮಧ್ಯೆ ನಡೆದ ಗಲಾಟೆ ತಾರಕಕ್ಕೇರಿ, ಹಾಡಹಗಲೇ ಚೂರಿಯಿಂದ ಇರಿದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಗಣಪತಿ ಗಲ್ಲಿಯಲ್ಲಿ ನಡೆದಿದೆ.

ಇಂತಿಯಾಜ್ ಪಠಾಣ್, ಅಯಾಜ್ ಪಠಾಣ್, ಸಮೀರ್ ಪಠಾಣ್ ಸೇರಿ 10 ಜನರಿಂದ ಹಲ್ಲೆ ನಡೆದಿದೆ. ಸಲೀಂ, ಶಾಬಾಜ್ ಹಾಗೂ ತೈಬಾಜ್ ಘಟನೆಯಲ್ಲಿ ತೀವ್ರ ಗಾಯಗೊಂಡವರು.

ಹಣ್ಣಿನ ದರ ನಿಗದಿ ಮತ್ತು ಸ್ಥಳದ ವಿಚಾರವಾಗಿ ವ್ಯಾಪಾರಿಗಳ ಮಧ್ಯೆ ಗಲಾಟೆ ನಡೆದಿದೆ. ಪರಿಣಾಮ ವ್ಯಾಪಾರಿಗಳು ನಡುರಸ್ತೆಯಲ್ಲಿಯೇ ಪರಸ್ಪರ ಚೂರಿಯಿಂದ ಹೊಡೆದಾಡಿಕೊಂಡು ಮೂವರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳಕ್ಕೆ ಡಿಸಿಪಿ ಅಮರನಾಥ ರಡ್ಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *