ಜೈಪುರಕ್ಕೆ ಹೋಗಿ ಕೈ ಮುರಿದುಕೊಂಡಿದ್ದೆ – ಕಬಡ್ಡಿ ಆಡಿ ನೆನಪು ಹಂಚಿಕೊಂಡ ಹೊರಟ್ಟಿ

Public TV
1 Min Read

ಧಾರವಾಡ: ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ (Kabaddi) ಆಟ ಆಡಿದ್ದೇನೆ. ಎರಡು ಬಾರಿ ಯೂನಿವರ್ಸಿಟಿ ಬ್ಲೂ ಆಗಿದ್ದೆ. ಅದರಲ್ಲಿ ಒಂದು ಬಾರಿ ಕಬಡ್ಡಿ ಆಟದಲ್ಲಿ‌ ನಾನು ಜೈಪುರಕ್ಕೆ ಹೋಗಿದ್ದಾಗ ಕೈಮುರಿದುಕೊಂಡು ಬಂದಿದ್ದೆ ಎಂದು ಪರಿಷತ್ ಸಭಾಪತಿ (Vidhan Parishad Chairman) ಬಸವರಾಜ ಹೊರಟ್ಟಿ (Basavaraj Horatti) ಹೇಳಿದರು.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕಬಡ್ಡಿ ಆಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಡಿದ್ದೇನೆ. 25 ವರ್ಷದ ನಂತರ ಇವತ್ತು ಆಡಿದ್ದು ಬಹಳ ಖುಷಿಯಾಗಿದೆ ಎಂದರು.

ಪ್ರತಿವರ್ಷ ಶಾಸಕರ ದಿನಾಚರಣೆಯಲ್ಲಿ ನಾವು ಕಬಡ್ಡಿ ಅಡುತ್ತಿದ್ದೆವು. ಆದರೆ ಈಗ ಅದು ಬಂದ್ ಆಗಿದೆ. ಕಬಡ್ಡಿಯಲ್ಲಿ ಸಂಪೂರ್ಣವಾದ ವ್ಯಾಯಾಮ ಸಿಗುತ್ತದೆ. ಎಷ್ಟೋ ವರ್ಷದ ನೆನಪು ಇಂದು ಆಗಿದೆ. ನಾನು ಜೈಪುರಕ್ಕೆ ಹೋಗಿ ಕಬಡ್ಡಿ ಆಡಿ ಕೈ ಮುರಿದುಕೊಂಡು ಬಂದಿದ್ದೆ ಎಂದು ಹಳೆಯ ನೆನಪನ್ನು ಹಂಚಿಕೊಂಡರು. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ

ನಾವು ಚಿಕ್ಕವರಿದ್ದಾಗ ಮಣ್ಣಿನಲ್ಲೇ ಅಡುತ್ತಿದ್ದೆವು. ಆದರೆ ಈಗ ಸುಧಾರಣೆಯಾಗಿದ್ದು, ಶಾಸಕರ ದಿನಾಚರಣೆ ಮಾಡುವಾಗ ರಾಮಕೃಷ್ಣ ಹೆಗಡೆ ಹಾಗೂ ಜೆ ಹೆಚ್ ಪಟೇಲ್ ಇದ್ದಾಗ ಕ್ರೀಡೆ ಇತ್ತು. ಅವಾಗ ಸಿಎಂ ತಂಡ ಹಾಗೂ ಎದುರಾಳಿ ಪ್ರತಿಪಕ್ಷದ ತಂಡದ ನಡುವೆ ಪಂದ್ಯ ಇರುತ್ತಿದ್ದವು. ಕಬಡ್ಡಿ, ರನ್ನಿಂಗ್ ಎಲ್ಲವೂ ಆಗ ಇರುತ್ತಿತ್ತು.‌ ಆದರೆ ಈಗ ರಾಜಕೀಯ ಹೊಲಸು ಆಗಿದ್ದಕ್ಕೆ ಎಲ್ಲವೂ ನಿಂತಿದೆ ಎಂದು ಹೊರಟ್ಟಿ ಹೇಳಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *