ಅನೈತಿಕ ಸರ್ಕಾರ- ಪರಿಷತ್‍ನಲ್ಲಿ ಬಿಜೆಪಿ, ಕಾಂಗ್ರೆಸ್ ಫೈಟ್

Public TV
2 Min Read

ಬೆಂಗಳೂರು: ಅನೈತಿಕ ಸರ್ಕಾರ ಅನ್ನೋದೊಂದೇ ಒಂದು ಪದ ಇವತ್ತು ಪರಿಷತ್ ಕಲಾಪದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಸಾಕ್ಷಿ ಆಯಿತು. ಪರಸ್ಪರ ಮಾತಿನ ಚಕಮಕಿ ನಡೆದು ಸದಸ್ಯರ ನಡುವೆ ಕಿತ್ತಾಟಕ್ಕೆ ಕಾರಣವಾಯಿತು.

ರಾಜ್ಯಪಾಲರ ಭಾಷಣದ ಮೇಲೆ ಕಾಂಗ್ರೆಸ್‍ನ ಯುಬಿ ವೆಂಕಟೇಶ್ ಭಾಷಣ ಮಾಡುತ್ತಿದ್ದರು. ಈ ವೇಳೆ ಯುಬಿ ವೆಂಕಟೇಶ್, ಈ ಸರ್ಕಾರ ಅನೈತಿಕವಾಗಿ ಬಂದಿರೋ ಸರ್ಕಾರ ಅಂತ ವಾಗ್ದಾಳಿ ನಡೆಸಿದರು. ಇದಕ್ಕೆ ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಅನೈತಿಕ ಸರ್ಕಾರ ಅಂದರೆ ಏನು ಕುಮಾರಸ್ವಾಮಿ- ಕಾಂಗ್ರೆಸ್ ಮಾಡಿದ್ದು ಯಾವ ಸರ್ಕಾರ ಎಂದು ನಾರಾಯಣಸ್ವಾಮಿ ಯುಬಿ ವೆಂಕಟೇಶ್ ವಿರುದ್ದ ತಿರುಗಿ ಬಿದ್ದರು. ಈ ವೇಳೆ ಸದನದಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತ್ತು. ಇದನ್ನೂ ಓದಿ:  ನೀನು ಜಮೀರ್ ಥರಾ ಆಡ್ತೀಯಲ್ಲೋ – ರೇಣುಕಾಚಾರ್ಯಗೆ ಮಾತಿನಿಂದ ತಿವಿದ ಬಿಎಸ್‍ವೈ

ಕಾಂಗ್ರೆಸ್ ಅವ್ರು ಅನೈತಿಕ ಸರ್ಕಾರ ಮಾಡಿದ್ದು, ಅಂತ ಬಿಜೆಪಿ ಸದಸ್ಯರು ಆಕ್ರೋಶ ಹೊರ ಹಾಕಿದರು. ಅನೈತಿಕ ಸರ್ಕಾರ ಅನ್ನೋ ಪದ ಕಡತದಿಂದ ತೆಗೆಯುವಂತೆ ಬಿಜೆಪಿ ಸದಸ್ಯರು ಒತ್ತಾಯ ಮಾಡಿದರು. ಆದರೆ ಅನೈತಿಕ ಸರ್ಕಾರ ಅನ್ನೋದು ಅಸಂವಿಧಾನಿಕ ಪದ ಅಲ್ಲ ಅಂತ ಸಭಾಪತಿ ಸ್ಥಾನದಲ್ಲಿ ಇದ್ದ ಶ್ರೀಕಂಠೇಗೌಡ ತಿಳಿಸಿದರು. ಇದನ್ನೂ ಓದಿ:  ನಿನ್ನೆ ಕೂಲಿ ಕೆಲಸ ಮಾಡುತ್ತಿದ್ದವ ಇಂದು ಮಾಡೆಲ್- ಅದೃಷ್ಟ ಅಂದ್ರೆ ಇದು

ಸಭಾಪತಿ ಶ್ರೀಕಂಠೇಗೌಡ ಮಾತಿಗೆ ಬಿಜೆಪಿ ಸದಸ್ಯರ ವಿರೋಧ ವ್ಯಕ್ತಪಡಿಸಿದರು. ಆ ಪದವನ್ನು ಕಡತದಿಂದ ತೆಗೆಯುವಂತೆ ಬಿಜೆಪಿ ಸದಸ್ಯರ ಬಿಗಿ ಪಟ್ಟು ಹಿಡಿದರು. ಆಗ ಸದನದಲ್ಲಿ ಮತ್ತೆ ಮಾತಿನ ಚಕಮಕಿ ಪ್ರಾರಂಭ ಆಯಿತು. ಬಿಜೆಪಿಯ ಪ್ರಾಣೇಶ್, ಯಾರ‍್ಯಾರು ನೈತಿಕತೆಯಿಂದ ಸರ್ಕಾರ ಮಾಡಿದ್ದಾರೆ ಗೊತ್ತಿದೆ. ಅವರು ಮಾಡಿದಾಗ ನೈತಿಕ. ನಾವು ಮಾಡಿದರೆ ಅನೈತಿಕ ಆಗುತ್ತಾ ಅಂತ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೆಹರ್ ಸಿಂಗ್ ಮಾತಾಡಿ, 15 ಜನ ರಾಜೀನಾಮೆ ಕೊಟ್ಟು ಜನರಿಂದ ಆಯ್ಕೆ ಆಗಿದ್ದಾರೆ. ಅನೈತಿಕ ಸರ್ಕಾರ ಅನ್ನೋದು ಸರಿಯಲ್ಲ ಅಂತ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಮಧ್ಯೆ ಪ್ರವೇಶ ಮಾಡಿಸಭಾಪತಿಗಳು ಗಲಾಟೆ ತಿಳಿಗೊಳಿಸಿದರು. ಇದನ್ನೂ ಓದಿ: ಹಿಜಬ್‌ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್‌ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ

Share This Article
Leave a Comment

Leave a Reply

Your email address will not be published. Required fields are marked *