ರೈತರ ಸಾಲ ಮನ್ನಾ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಎಸ್.ಟಿ. ಸೋಮಶೇಖರ್

Public TV
1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೆ ರೈತರ (Farmers) ಸಾಲಮನ್ನಾ ಮಾಡುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekar) ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ (Vidhan Parishad) ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ (JDS) ಸದಸ್ಯ ಭೋಜೇಗೌಡ, ರೈತರ ಸಾಲಮನ್ನಾದ ಬಗ್ಗೆ ಪ್ರಶ್ನೆ ಕೇಳಿದರು. ಸದಸ್ಯರು ಸದನದಲ್ಲಿ ಇಲ್ಲದ ಕಾರಣ, ಸದನದಲ್ಲಿ ಚರ್ಚೆ ಆಗಲಿಲ್ಲ. ಆದರೆ ಸದಸ್ಯರ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಮತ್ತೆ ಸಾಲಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಂದಕಕ್ಕೆ ಉರುಳಿದ ಬಸ್ – 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಜನವರಿ 2023 ಅಂತ್ಯಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೂಲಕ 22,88,090 ರೈತರು ಸಾಲ ಪಡೆದಿದ್ದಾರೆ. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ 9,006 ರೈತರು ಸಾಲ ಪಡೆದಿದ್ದಾರೆ. ಒಟ್ಟು 22,96,096 ರೈತರು 1 ಲಕ್ಷದ ವರೆಗೆ ಸಾಲ ಪಡೆದಿದ್ದಾರೆ. ಮತ್ತೆ ರೈತರ ಸಾಲಮನ್ನಾ ಮಾಡುವ ಚಿಂತನೆ ಸರ್ಕಾರಕ್ಕೆ ಇಲ್ಲ. ‌ಸಾಲಮನ್ನಾ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಲಿಖಿತದ ‌ಮೂಲಕ ಉತ್ತರ ನೀಡಿದರು. ಇದನ್ನೂ ಓದಿ: ಮುಂಬೈ ದಾಳಿಯ ದುಷ್ಕರ್ಮಿಗಳು ಇನ್ನೂ ಮುಕ್ತವಾಗಿ ಓಡಾಡಿಕೊಂಡಿದ್ದಾರೆ – ಪಾಕ್ ನೆಲದಲ್ಲೇ ಜಾವೇದ್ ಅಖ್ತರ್ ಕಿಡಿ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
2 Comments

Leave a Reply

Your email address will not be published. Required fields are marked *