ಬೆಂಗಳೂರು: ಇದು ರೌಡಿ ನಲಪಾಡ್ ರಾಕ್ಷಸತ್ವದ ಘೋರ ಕಥನ. ವಿದ್ವತ್ ಮೇಲೆ ಯಾವ್ಯಾವ ರೀತಿ ದಾಳಿ ನಡೆಯಿತು, ಆಸ್ಪತ್ರೆಯಲ್ಲೂ ನಲಪಾಡ್ ಗ್ಯಾಂಗ್ ಅಬ್ಬರಿಸಿದ್ದು ಹೇಗೆ ಹಾಗೂ ನಲಪಾಡ್ ದಾಳಿಯ ಬಗ್ಗೆ ವಿದ್ವತ್ ಪಬ್ಲಿಕ್ ಟಿವಿಗೆ ತಿಳಿಸಿದ ಎಕ್ಸ್ ಕ್ಲೂಸೀವ್ ಮಾತು ಇಲ್ಲಿದೆ. ಇದನ್ನೂ ಓದಿ: Exclusive ಹ್ಯಾರಿಸ್ ಮಗನ ಮತ್ತೊಂದು ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ
ಫರ್ಜಿ ಕೆಫೆಯಲ್ಲಿ ಕಾಲು ಚಾಚಿಕೊಂಡು ಕುಳಿತಿದ್ದಕ್ಕೆ ಕ್ಷಮೆ ಕೋರುವಂತೆ ಹೇಳಿದರು. ತಪ್ಪಿಲ್ಲದ ಕಾರಣಕ್ಕೆ ನಾನು ಆರಂಭದಲ್ಲಿ ನಲಪಾಡ್ ಮಾತು ಕೇಳಲಿಲ್ಲ. ಎಂಎಲ್ಎ ಹ್ಯಾರಿಸ್ ಮಗನಿಗೇ ಎದುರು ಮಾತನಾಡುತ್ತೀಯಾ ಎನ್ನುತ್ತಾ ಅಬ್ಬರಿಸಿದ್ರು. ಏಕಾಏಕಿ ಹೊಡೆಯಲು ಶುರು ಮಾಡಿದ್ದರಿಂದ sorry.. sorry.. ಎಂದೆ. ಆದರೆ sorry ಎಂದರೂ ಕೂಡ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದರು. ನಲಪಾಡ್ ಜತೆ ಸುಮಾರು 15 ಸ್ನೇಹಿತರು ಇದ್ದರು. ಅವರಲ್ಲಿ ಆರೇಳು ಮಂದಿ ಬೌನ್ಸರ್ಗಳು. ಎಲ್ಲರೂ ಸೇರಿಕೊಂಡು ಮನಸೋ ಇಚ್ಛೆ ಹೊಡೆದರು. ಮೈಮೇಲೆ ಕುರ್ಚಿಗಳನ್ನು ಎಸೆದರು, `ಕ್ಷಮೆ ಕೇಳು’ ಎಂದರು. ಕ್ಷಮೆ ಯಾಚಿಸಿದರೂ ಹೊಡೆದರು ಎಂದು ವಿದ್ವತ್ ಹೇಳಿದ್ದಾರೆ. ಇದನ್ನೂ ಓದಿ: ನಲಪಾಡ್ ಬಳಿ ಇವೆ ಪೊಲೀಸರು, ಮಿಲಿಟರಿಯವರು ಬಳಸೋ ಬೋರ್ ಗನ್!
ನಲಪಾಡ್ ಗ್ಯಾಂಗ್ ಫರ್ಜಿ ಕೆಫೆಯಲ್ಲಿ ಮಾತ್ರ ಅಬ್ಬರಿಸಿರಲಿಲ್ಲ. ಚಿಕಿತ್ಸೆಗಾಗಿ ಮಲ್ಯಾ ಆಸ್ಪತ್ರೆಗೆ ದಾಖಲಾದ್ರೂ ಬಿಟ್ಟಿರಲಿಲ್ಲ ಆ ಗ್ಯಾಂಗ್. ವಿದ್ವತ್ಗೆ ನರ್ಸ್ವೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವ ವೇಳೆ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿತ್ತು. ಎರಡು ಕಾರುಗಳಲ್ಲಿ ಆಸ್ಪತ್ರೆಗೆ ನುಗ್ಗಿದ ರೌಡಿ ನಲಪಾಡ್ ಹಾಗೂ ಸಹಚರರು, ಆಸ್ಪತ್ರೆ ಕೊಠಡಿಯ ಬಾಗಿಲು ಒದ್ದುಕೊಂಡೇ ಒಳನುಗ್ಗಿ ಪುನಃ ವಿದ್ವತ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ರು. ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!
ರಕ್ಷಣೆಗೆ ಹೋದ ವಿದ್ವತ್ ಸೋದರನ ಮೇಲೂ ನಲಪಾಡ್ ಹಲ್ಲೆ ನಡೆಸಿ, ಕೊರಳಪಟ್ಟಿ ಹರಿದಿದ್ದ. ಈ ವೇಳೆ ಗುರು ರಾಜ್ಕುಮಾರ್ ಅವರನ್ನ ನೋಡಿ ನಲಪಾಡ್ ಆಸ್ಪತ್ರೆಯಿಂದ ಹೊರಹೋಗಿದ್ದ. ಗುರು ರಾಜ್ಕುಮಾರ್ ಮಲ್ಯ ಆಸ್ಪತ್ರೆಗೆ ಬರದಿದ್ದರೆ, ನನ್ನ ತಮ್ಮನನ್ನು ಕೊಂದುಬಿಡುತ್ತಿದ್ರು ಎಂದು ಸಾತ್ವಿಕ್ ಹೇಳಿದ್ದಾರೆ. ಇದನ್ನೂ ಓದಿ: ಸ್ವಲ್ಪ ಮಿಸ್ ಆಗಿದ್ರೆ ರೌಡಿ ನಲಪಾಡ್ ಸೌದಿಗೆ ಪರಾರಿ!
ಇದನ್ನೂ ಓದಿ: ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ
https://www.youtube.com/watch?v=dy5Sl50Qi3k
https://www.youtube.com/watch?v=IHwUP3mtZXQ
ಇದನ್ನೂ ಓದಿ: ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ