ವೈಷ್ಣವಿ ಬೇಸರ ಮಾಡ್ಕೋಬೇಡಿ, ಯಾರೋ ಹುಳಿ ಹಿಂಡಿದ್ದಾರೆ: ವಿದ್ಯಾಭರಣ್

Public TV
2 Min Read

ಟಿ ವೈಷ್ಣವಿ ಗೌಡ ನಿಶ್ಚಿತಾರ್ಥ ವಿಷಯ ನಾನಾ ರೂಪಗಳನ್ನು ಪಡೆದುಕೊಳ್ಳುತ್ತಿದೆ. ವೈಷ್ಣವಿ ಗೌಡ ಮತ್ತು ನಟ ವಿದ್ಯಾಭರಣ್ ಇಬ್ಬರೂ ಪ್ರತ್ಯೇಕ ಹೇಳಿಕೆಗಳನ್ನು ನೀಡಿದ್ದು, ಅದು ನಿಶ್ಚಿತಾರ್ಥ ಅಲ್ಲ, ಕೇವಲ ಹಣ್ಣು ಕಾಯಿ ಇಡುವ ಶಾಸ್ತ್ರ ಎಂದು ಸ್ಪಷ್ಟ ಪಡಿಸಿದ್ದಾರೆ. ಆದರೆ, ವಿದ್ಯಾಭರಣ್ ಬಗ್ಗೆ ನಟಿಯೊಬ್ಬಳು ಮಾತನಾಡಿದ್ದಾಳೆ ಎನ್ನಲಾದ ಆಡಿಯೋ ಮಾತ್ರ ನಾನಾ ಅನುಮಾನಗಳನ್ನು ಹುಟ್ಟು ಹಾಕಿದೆ.

ಈ ಕುರಿತಂತೆ ಪಬ್ಲಿಕ್‌ ಟಿವಿ ಜೊತೆಗೆ ಮಾತನಾಡಿದ ವಿದ್ಯಾಭರಣ್ ಅವರು, ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

ನಾಳೆ ಕಮೀಷನರ್‍ಗೆ ದೂರು ನೀಡುತ್ತೇನೆ. ನನ್ನ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಬದಲು ಆಕೆಯೇ ಕಂಪ್ಲೆಂಟ್ ಕೊಡಬಹುದಿತ್ತು. ನಮ್ಮ ಏಳಿಗೆಯನ್ನು ಸಹಿಸಲು ಸಾಧ್ಯವಾಗದೇ ಇರುವ ಹಿತಶತ್ರುಗಳು ಹೀಗೆ ಮಾಡುತ್ತಿದ್ದಾರೆ. ನಾನು ಇನ್‍ಸ್ಟಾಗ್ರಾಮ್ ಅನ್ನು ಮೊದಲೇ ಡಿಲೀಟ್ ಮಾಡಿದ್ದೇನೆ. ನನ್ನ ಇನ್‍ಸ್ಟಾಗ್ರಾಮ್ ಹ್ಯಾಕ್ ಆಗಿತ್ತು. ತುಂಬಾ ಹಿಂದೆಯೇ ಡಿಲೀಟ್ ಆಗಿದೆ. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ರೀತಿ ಬೇರೆ ಯಾವ ಹುಡುಗನಿಗೂ ಹೀಗೆ ಆಗಬಾರದು. ಇವತ್ತು ಬುದ್ಧಿ ಕಲಿಸಿಲ್ಲ ಅಂದರೆ, ನಾಳೆ ಇದೇ ರೀತಿ ಸಾಕಷ್ಟು ಜನರಿಗೆ ಆಗುತ್ತದೆ. ನಾನು ಮೂರು ತಿಂಗಳು ಯಾವ ಹುಡುಗಿಯನ್ನು ಕೂಡ ಕರೆದುಕೊಂಡು ಬಂದಿಲ್ಲ. ನೇರವಾಗಿ ಬಂದು ದೂರು ಕೊಡದೇ ಈ ರೀತಿ ಮಾಡಿರುವುದರಿಂದ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *