ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ

Public TV
1 Min Read

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನಿಸಿದ್ದಕ್ಕೆ ತೆಲುಗು ನಟ ವಿಜಯ್ ದೇವರಕೊಂಡ ರೊಚ್ಚಿಗೆದಿದ್ದಾರೆ.

ಇತ್ತೀಚೆಗೆ ರಶ್ಮಿಕಾ ತಮ್ಮ ಮುಂಬರುವ ‘ಡಿಯರ್ ಕಾಮ್ರೆಡ್’ ಚಿತ್ರ ಪ್ರಮೋಶನ್‍ಗಾಗಿ ನಟ ವಿಜಯ್ ದೇವರಕೊಂಡ ಜೊತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ರಶ್ಮಿಕಾ ಅವರನ್ನು ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸಲಾಯಿತು.

ರಶ್ಮಿಕಾ ಅವರನ್ನು ರಕ್ಷಿತ್ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸುತ್ತಿದ್ದಂತೆ ವಿಜಯ್, ನನಗೆ ಈಗಲೂ ನಿಮ್ಮ ಪ್ರಶ್ನೆ ಅರ್ಥ ಆಗುತ್ತಿಲ್ಲ. ಈ ವಿಚಾರದಲ್ಲಿ ಬೇರೆಯವರು ಭಾಗಿಯಾಗುವುದು ಸರಿಯಲ್ಲ. ಹೇಗೆ ಬೇರೆಯವರು ಭಾಗಿಯಾಗುತ್ತಾರೆ ಎಂದು ಪ್ರಶ್ನಿಸಿದರು.


ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ, ಇದೊಂದು ಬಹಳ ದೊಡ್ಡ ಪ್ರಶ್ನೆಯಾಗಿದ್ದು ಈಗಲೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಜೋಡಿಯ `ಡಿಯರ್ ಕಾಮ್ರೆಡ್’ ಸಿನಿಮಾ ಇದೇ ಜುಲೈ 26ರಂದು ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ. ಡಿಯರ್ ಕಾಮ್ರೆಡ್ ದಕ್ಷಿಣ ಭಾರತದಲ್ಲಿ ಭಾರೀ ಸದ್ದು ಮಾಡಿದ್ದು, ಚಿತ್ರತಂಡ ಭರ್ಜರಿ ಪ್ರಚಾರ ನಡೆಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *