ಬಿಜೆಪಿ ಸೇರುವ ಬಗ್ಗೆ ವಿಜಯ್ ಶಂಕರ್ ಸ್ಪಷ್ಟನೆ

Public TV
1 Min Read

ಮೈಸೂರು: ಬಿಜೆಪಿ ಸೇರುವುದರ ಬಗ್ಗೆ ಮುಂದಿನ ವಾರ ಸ್ಪಷ್ಟನೆ ಕೊಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ನನಗೆ ಪಕ್ಷ ಸೇರಲು ಆಹ್ವಾನ ಬಂದಿದೆ. ಈ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲು ಅಭಿಮಾನಿಗಳ ಸಭೆ ನಡೆಸುತ್ತಿದ್ದೇನೆ. ಇನ್ನೊಂದು ವಾರದಲ್ಲಿ ಸ್ಪಷ್ಟ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ತಮಗೆ ನೀಡಿರೋ ಆಹ್ವಾನ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಬದಲಾದ ರಾಜಕೀಯದಲ್ಲಿ ಬದಲಾವಣೆ ನನ್ನ ಪಾಲಿಗೆ ಅಳಿವು – ಉಳಿವಿನ ಪ್ರಶ್ನೆಯಾಗಿದೆ. ರಾಜಕೀಯದಲ್ಲಿ ಎಲ್ಲಾ ಸಂದರ್ಭದಲ್ಲೂ ನಮ್ಮ ಎಲ್ಲಾ ನಿರ್ಧಾರಗಳು ಫಲ ನೀಡುವುದಿಲ್ಲ. ಕಾಂಗ್ರೆಸ್ ಸೇರಿದ ತೀರ್ಮಾನದ ಲೆಕ್ಕವೂ ಹೀಗೆ ಫಲ ಕೊಡಲಿಲ್ಲ ಎಂದು ಹೇಳಿದರು.

ರಾಜಕಾರಣಿ ಎಷ್ಟು ವರ್ಷ ಮನೆಯಲ್ಲಿ ಕೂರಲು ಸಾಧ್ಯ ಹೇಳಿ. ಹೀಗಾಗಿ ಬದಲಾವಣೆ ಬಯಸಿ ಅಭಿಮಾನಿಗಳ ಅಭಿಪ್ರಾಯ ಕೇಳುತ್ತಿದ್ದೇನೆ. ಹುಣಸೂರು ಉಪ ಚುನಾವಣೆ ದೃಷ್ಟಿಯಿಂದ ಇಂಥಹ ತೀರ್ಮಾನ ಕೈಗೊಳ್ಳುತ್ತಿಲ್ಲ. ಒಂದು ರಾಷ್ಟ್ರೀಯ ಪಕ್ಷಕ್ಕೆ ಕಂಡಿಷನ್ ಹಾಕಿ ಸೇರಲು ಆಗಲ್ಲ. ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನಕ್ಕೆ ಬರುತ್ತೇನೆ. ಬಿಜೆಪಿ ಸೇರುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಯಾಕೆ ಬಿಟ್ಟೆ, ಅಲ್ಲಿನ ಪರಿಸ್ಥಿತಿ ಏನಾಗಿದೆ ಅನ್ನೋದನ್ನು ವಿವರಿಸುತ್ತೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *