ಇನ್ನೂ ಪತ್ತೆಯಾಗದ ನಾಗರತ್ನ- ಪೊಲೀಸರಿಂದ ತೀವ್ರ ಹುಡುಕಾಟ

Public TV
1 Min Read

ಬೆಂಗಳೂರು: ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೊದಲ ಪತ್ನಿ ನಾಗರತ್ನ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಾಗರತ್ನ ಪೊಲೀಸರ ಕಣ್ಣು ತಪ್ಪಿಸಿದ್ದು, ಇದೂವರೆಗೂ ಪತ್ತೆಯಾಗಿಲ್ಲ. ಹೀಗಾಗಿ ಗಿರಿನಗರ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಹೊಸೂರು ಸುತ್ತಮುತ್ತ ಕಳೆದ ರಾತ್ರಿಯೂ ನಾಗರತ್ನಗಾಗಿ ಗಿರಿನಗರ ಪೊಲೀಸರ ಹುಡುಕಾಡಿದ್ದಾರೆ.

ಇಂದು ನಾಗರತ್ನ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸೋ ಸಾಧ್ಯತೆಗಳಿವೆ. ಜಾಮೀನು ರಹಿತ ಕೇಸ್ ಹಾಕಿದ್ದ ಕಾರಣಕ್ಕೆ ಯಾರ ಕೈಗೂ ಸಿಗದೆ ನಾಗರತ್ನ ಎಸ್ಕೇಪ್ ಆಗಿದ್ದಾರೆ. ಕೆಲವು ಮೂಲಗಳ ಪ್ರಕಾರ ನ್ಯಾಯಾಧೀಶರ ಮುಂದೆ ನಾಗರತ್ನ ಸರೆಂಡರ್ ಆಗೋ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದ್ರೆ ಸರೆಂಡರ್ ಆಗೋಕು ಮುಂಚೆಯೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಜಾಮೀನು ನಿರಾಕರಣೆ ಆದ ಪಕ್ಷದಲ್ಲಿ ನ್ಯಾಯಾಧೀಶರ ಮುಂದೆ ಸರೆಂಡರ್ ಆಗಲು ನಾಗರತ್ನ ಚಿಂತನೆ ನಡೆಸಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=5y-xIKjMyBI

https://www.youtube.com/watch?v=lxI7qMTcO28

Share This Article
Leave a Comment

Leave a Reply

Your email address will not be published. Required fields are marked *