ದರ್ಶನ್ ನೋಡಲು ದಿನಕರ್ ತೂಗುದೀಪ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮಿ

Public TV
1 Min Read

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಇಂದು (ಜು.22) ದಿನಕರ್ ತೂಗುದೀಪ್ ಜೊತೆ ಪತ್ನಿ ವಿಜಯಲಕ್ಷ್ಮಿ (Vijaylakshmi) ಆಗಮಿಸಿದ್ದಾರೆ. ಈ ವಾರವು ಕುಟುಂಬದ ಜೊತೆ ಜೈಲಿಗೆ ದರ್ಶನ್ (Darshan) ಪತ್ನಿ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ:ದರ್ಶನ್ ಪ್ರಕರಣ: ಈ ಘಟನೆ ಜೀರ್ಣಿಸಿಕೊಳ್ಳೋಕೆ ಆಗುತ್ತಿಲ್ಲ ಎಂದ ವಿನೋದ್ ರಾಜ್

ಪತಿಯನ್ನು ನೋಡಲು 5ನೇ‌ ಬಾರಿ ಪತ್ನಿ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದು, ಅತ್ತಿಗೆ ಜೊತೆ ದಿನಕರ್‌ (Dinakar) ಕೂಡ ಆಗಮಿಸಿದ್ದಾರೆ. ಕಳೆದ ವಾರಾಂತ್ಯ ದರ್ಶನ್‌ಗೆ ಜ್ವರ ಇತ್ತು. ಇದೀಗ ಅವರು ಚೇತರಿಸಿಕೊಳ್ತಿದ್ದಾರೆ. ಈ ಹಿನ್ನೆಲೆ ಪತಿಯನ್ನು ಕಾಣಲು ವಿಜಯಲಕ್ಷ್ಮಿ ಜೈಲಿಗೆ ಭೇಟಿ ಕೊಟ್ಟಿದ್ದಾರೆ. ಜೊತೆಗೆ ದರ್ಶನ್‌ರನ್ನು ಕಾಣಲು ವಿನೋದ್ ರಾಜ್ ಕೂಡ ಜೈಲಿನ ಬಳಿ ಕಾಯುತ್ತಿದ್ದಾರೆ.

ಅದಷ್ಟೇ ಅಲ್ಲ, ಮನೆ ಊಟ ದರ್ಶನ್‌ಗೆ ಕೊಡಲು ನ್ಯಾಯಾಲಯದ ತೀರ್ಪು ಇಂದು ಬರಬೇಕಿದೆ. ಕೋರ್ಟ್‌ನ ಆದೇಶಕ್ಕಾಗಿ ದರ್ಶನ್ ಕುಟುಂಬಸ್ಥರು ಎದುರು ನೋಡ್ತಿದ್ದಾರೆ.

Share This Article