ನಿರಾಣಿಗೆ ಹುಚ್ಚು ಹಿಡಿದಿದೆ, ತಲೆ ಕೆಟ್ಟಿದೆ – ಕಾಶಪ್ಪನವರ್ ಕಿಡಿ

Public TV
1 Min Read

ಗದಗ: ಸಮಾಜ ಪೀಠವನ್ನ ಮಾಡಿದೆ. ನಿರಾಣಿಗೆ ಹುಚ್ಚು ಹಿಡಿದಿದೆ, ತಲೆ ಕೆಟ್ಟಿದೆ ಅಧಿಕಾರದ ವ್ಯಾಮೋಹ ಏರಿದೆ. ಹೀಗಾಗಿ ಬೇಕಾ ಬಿಟ್ಟಿ ಮಾತಾಡುತ್ತಿದ್ದಾರೆ ಎಂದು ವಿಜಯಾನಂದ ಕಾಶಪ್ಪನವರ್ ಕಿಡಿಕಾರಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮಖಂಡಿ ಕಾರ್ಯಕ್ರಮಕ್ಕೆ ತಾಕತ್ತಿದ್ರೆ ಕಲ್ಲು ಹೊಡೆಸಲಿ, ಪಂಚಮಸಾಲಿ ಪ್ರತಿಜ್ಞೆ ಅಭಿಯಾನ ಜಮಖಂಡಿಯಲ್ಲಿ ನಡದೇ ನಡೆಯುತ್ತೆ. ಸಮಾಜದ ಒಳಿತಿಗಾಗಿ ಅವರು ಕೆಲಸ ಮಾಡುತ್ತಿಲ್ಲ. ಕೆಲವರು ಮುಖ್ಯಮಂತ್ರಿಯಾಗ್ಬೇಕು, ಮಂತ್ರಿ ಆಗ್ಬೇಕು ಅನ್ನೋ ನಿಟ್ಟಿನಲ್ಲಿದ್ದಾರೆ. ಮೀಸಲಾತಿ ಸಿಗೋವರೆಗೂ ನಾವು ಹೋರಾಟ ನಿಲ್ಲಿಸಲ್ಲ. ಇವರ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಮುಂದೆ ಒಂದು ದಿನ ಸಮಾಜ ಇಂತವರಿಗೆ ತಕ್ಕಪಾಠ ಕಲಿಸಲಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದಂತ ದರಿದ್ರ ಸರ್ಕಾರ ಇನ್ನೊಂದಿಲ್ಲ, ದಮ್ಮಯ್ಯ ಅಂತೀನಿ ಕಣ್ರಯ್ಯ ಈ ಸರ್ಕಾರ ಕಿತ್ತು ಬಿಸಾಕಿ: ಸಿದ್ದರಾಮಯ್ಯ

ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಆರಂಭದಿಂದಲೂ ಕೆಲವರು ಮಾಡುತ್ತಿದ್ದಾರೆ. ಪಂಚಮಸಾಲಿ ಪ್ರತಿಜ್ಞೆ ಅಭಿಯಾನ ಜಮಖಂಡಿಯಲ್ಲಿ ನಡದೇ ನಡೆಯುತ್ತೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

ಕೂಡಲ ಸಂಗಮ ಪೀಠಕ್ಕೆ ಪರ್ಯಾಯ ಸ್ವಾಮೀಜಿ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಮಾಜದ ಪೀಠವನ್ನು ಯಾರಿಂದಲೂ ಒಡೆಯಲು ಸಾಧ್ಯವಿಲ್ಲ. ಅವರಿಗೆ ತಾಕತ್ ಇದ್ರೆ ಒಡೆದು ತೋರಿಸಲಿ. ಪೀಠ ಬದಲಾಗಲ್ಲ, ಇದೇ ಸ್ವಾಮಿಗಳು ಪೀಠದಲ್ಲಿ ಇರ್ತಾರೆ ಎಂದು ವಿಜಯಾನಂದ ಕಾಶಪ್ಪನವರ್ ತಿಳಿಸಿದರು.

 

Share This Article
Leave a Comment

Leave a Reply

Your email address will not be published. Required fields are marked *