ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ 2.5 ಲಕ್ಷ ದರೋಡೆ

Public TV
1 Min Read

ವಿಜಯಪುರ: ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿದ್ದಾರೆ.

ಗ್ರಾಮೀಣ ಕೋಟಕ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್ ಕುಮಾರ ಹಂಚನಾಳ, ಹಂಜಗಿ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದಿಂದ 1.5 ಲಕ್ಷ ಹಣ ಸಂಗ್ರಹಿಸಿ ಕೊಂಡುಬರುವಾಗ ಈ ಕೃತ್ಯ ಎಸಗಲಾಗಿದೆ. ದರೋಡೆ ಮಾಡುವ ಸಂದರ್ಭದಲ್ಲಿ ವಿನೋದ್‍ಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಗ್ರಾಮದಲ್ಲಿ ಹಣವನ್ನು ಸಂಗ್ರಹಿಸಿ ಬರುತ್ತಿದ್ದನ್ನು ಗಮನಿಸಿ ಬೈಕಿನಲ್ಲಿ ಹಿಂಬಾಲಿಸಿ ಬಂದ ಮೂವರು ಮುಸುಕುಧಾರಿಗಳು ಸಿನಿಮಾ ಶೈಲಿಯಲ್ಲಿ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಹಲ್ಲೆ ಮಾಡಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *