ನನ್ನ ಅಭಿಮಾನಿಗಳು ಅಂತ ಹೇಳಿಕೊಂಡು ಧಕ್ಕೆ ತರಲು ಸಂಚು ರೂಪಿಸಿದ್ದಾರೆ: ವಿಜಯೇಂದ್ರ

Public TV
1 Min Read

ಮೈಸೂರು: ನಾಳಿನ ಮೋದಿ ಕಾರ್ಯಕ್ರಮಕ್ಕೆ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ನನ್ನ ಅಭಿಮಾನಿಗಳು ಅಂತ ಹೇಳಿಕೊಂಡು ಬಿಜೆಪಿ ಬಾವುಟ, ಟೋಪಿ ಹಾಕಿಕೊಂಡು ಧಕ್ಕೆ ತರಲು ಸಂಚು ರೂಪಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಆರೋಪಿಸಿದ್ದಾರೆ.

ನನ್ನ ಅಭಿಮಾನಿಗಳು ಅಂತ ಹೇಳಿಕೊಂಡು ವರುಣಾದಲ್ಲಿ ನೋಟಾ ಅಭಿಯಾನವೂ ಇದೇ ರೀತಿ ಆಗುತ್ತಿದೆ ಅಂತ ಕಿಡಿಕಾರಿದ್ದಾರೆ.

ವರುಣಾದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹಾಗೂ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಉಳಿಸಿ ಸೇವ್ ಬಿಜೆಪಿ ಹೆಸರಿನಲ್ಲಿ ವಿಜಯೇಂದ್ರ ಅಭಿಮಾನಿಗಳು ಅಭಿಯಾನ ಶುರು ಮಾಡಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಈ ಆರೋಪ ಮಾಡಿದ್ದಾರೆ.

ವರುಣಾ ಅಭ್ಯರ್ಥಿ ತೋಟದಪ್ಪ ಬಸವರಾಜುಗೆ ವಿಜಯೇಂದ್ರ ಬೆಂಬಲಿಗರಿಂದ ಬೆದರಿಕೆ ಕರೆಗಳು ಬರುತ್ತಿದೆ. ಕಾಲ್ ರೆಕಾರ್ಡಿಂಗ್ ಸಮೇತ ಇಂದು ತಿ.ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕರೆ ಮಾಡಿದ ವ್ಯಕ್ತಿಗಳ ವಿರುದ್ದ ಕ್ರಮಬೇಡ. ಕೇವಲ ಎಚ್ಚರಿಕೆ ನೀಡಿ ಎಂದು ಪೊಲೀಸ್ ರಲ್ಲಿ ಅವರು ಮನವಿ ಮಾಡಿದ್ದಾರೆ.

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ರಾಮದಾಸ್ ಪರ ವಿಜಯೇಂದ್ರ ಮತಯಾಚನೆ ಮಾಡುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ರಾಮದಾಸ್ ಬೆಂಬಲಿಗರೇ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *