ವಿಜಯೇಂದ್ರ‌ ಮುಂದಿನ‌ ಮುಖ್ಯಮಂತ್ರಿ ಎಂದ ಶಾಸಕ ಶಿವರಾಜ್ ಪಾಟೀಲ್

Public TV
1 Min Read

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ರಾಯಚೂರು ನಗರ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ್ ಪಾಟೀಲ್ (Shivraj Patil) ಹಾಡಿಹೊಗಳಿದ ವಿಡಿಯೋ ವೈರಲ್ ಆಗಿದೆ.

ಲೋಕಸಭಾ ಚುನಾವಣೆ (MP Elections) ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೊಗಳಿದ್ದ ಡಾ.ಶಿವರಾಜ್ ಪಾಟೀಲ್ ಹೇಳಿಕೆ ಈಗ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಬೇಕು ಎಂಬ ಕಾರಣಕ್ಕೆ ಅಶೋಕ ಚಕ್ರವರ್ತಿಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ವಿಜಯೇಂದ್ರ ತಿರುಗಾಡುತ್ತಿದ್ದಾರೆ. ಈ ರಾಜ್ಯ ಕಂಡಂತ ಅತ್ಯಂತ ಕಿರಿಯ, ಮುತ್ಸದಿ ರಾಜಕಾರಣಿ ವಿಜಯೇಂದ್ರ ಎಂದು ವೇದಿಕೆ ಮೇಲೆ ಶಾಸಕ ಶಿವರಾಜ್ ಪಾಟೀಲ್ ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ.. ಭಕ್ತರಿಗೆ ಈಗಲೇ ಪ್ರವೇಶವಿಲ್ಲ: ವಕೀಲ ಸೋಹನ್‌ ಲಾಲ್‌ ಆರ್ಯ

Share This Article