ಮಂಡ್ಯ | ಗ್ರಾಮಲೆಕ್ಕಾಧಿಕಾರಿ ನಾಪತ್ತೆ – ಕಾವೇರಿ ನದಿಗೆ ಹಾರಿರುವ ಶಂಕೆ

Public TV
1 Min Read

ಮಂಡ್ಯ: ಮಳವಳ್ಳಿ ತಾಲೂಕಿನ ಬಿಜಿ ಪುರದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು (Village Accountant) ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಾಪತ್ತೆಯಾದ ಗ್ರಾಮಲೆಕ್ಕಾಧಿಕಾರಿಗಾಗಿ ಹುಡುಕಾಟ ನಡೆಯುತ್ತಿದೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರದ ನಾಡಕಚೇರಿಯಲ್ಲಿ ಕೆಲಸ ಮಾಡುತಿದ್ದ ವಿಎ ನಿರಂಜನ್ ನಾಪತ್ತೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!

ಇಂದು ಮಧ್ಯಾಹ್ನ 1 ಗಂಟೆಯ ವರೆಗೂ ಕಚೇರಿಯಲ್ಲಿಯೇ ಇದ್ದ ವಿಎ ನಿರಂಜನ್ ಬಳಿಕ ತನ್ನ ಬೈಕ್‌ನಲ್ಲಿ ಹೊರಗೆ ಹೋಗಿದ್ದಾರೆ. ಕೊಳ್ಳೆಗಾಲದ ಕಾವೇರಿ ಪುರ ಸೇತುವೆ ಮೇಲೆ ಬೈಕ್ ಪತ್ತೆಯಾಗಿದ್ದು, ಬೈಕ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

ನಿರಂಜನ್ ಗಾಗಿ ಅಗ್ನಿಶಾಮಕದಳದೊಂದಿಗೆ ಪೊಲೀಸರ ಶೋಧಕಾರ್ಯ ಮುಂದುವರೆದಿದೆ. ಇದನ್ನೂ ಓದಿ:ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

Share This Article